ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಿದೆ. ಭಾನುವಾರ ಒಂದೇ ದಿನ 3 ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ. ಹೀಗಾಗಿ ದ ಕ ಜಿಲ್ಲೆಯಲ್ಲಿ ಕಟ್ಟೆಚ್ಚರ ಅಗತ್ಯವಾಗಿದೆ.
ಭಾನುವಾರ 3 ಜನ ಕೊರೊನಾ ವೈರಸ್ ಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸುರತ್ಕಲ್ ಗ್ರಾಮದ ಜೋಕಟ್ಟೆ ನಿವಾಸಿ 51 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 26ರ ಸಂಜೆ ಕೊರೊನಾ ಸೋಂಕು ಪತ್ತೆಯಾಗಿತ್ತು.
ಭಾನುವಾರ ಬೆಳಗ್ಗೆ ಬಂಟ್ವಾಳ ಮೂಲದ 57 ವರ್ಷದ ವೃದ್ದೆ ಹಾಗೂ ಸುರತ್ಕಲ್ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…