#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

March 27, 2020
6:49 PM

ಸುಳ್ಯ: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಹಳ್ಳಿ ಹಳ್ಳಿಯಲ್ಲಿ ಕೊರೊನಾ ವೈರಸ್  ಹರಡುವುದು ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ. ಶುಕ್ರವಾರ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಪಿಡಿಒ ಶ್ಯಾಮ ಪ್ರಸಾದ್ ಹಾಗೂ ಗ್ರಾಪಂ ಸದಸ್ಯ ರಾಕೇಶ್ ಮೆಟ್ಟಿನಡ್ಕ ಅವರ ನೇತೃತ್ವದಲ್ಲಿ ಎರಡನೇ ಬಾರಿ ಮೈಕ್ ಮೂಲಕ ಜಾಗೃತಿ ಸಂದೇಶ ನೀಡಲಾಯಿತು. ಸ್ವತ: ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಅವರೇ ಅನೌನ್ಸ್ ಮಾಡುವ ಮೂಲಕ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿದರು.

Advertisement
Advertisement

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಹರಡುವುದು  ಮಾತ್ರವಲ್ಲ ಗ್ರಾಮದಲ್ಲಿ  ಒಂದೇ ಒಂದು ಕೊರೊನಾ ವೈರಸ್ ಪ್ರಕರಣ ಕಂಡುಬರಬಾರದು ಎಂಬ ನೆಲೆಯಲ್ಲಿ  ಜಾಗೃತಿ ಹಾಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ವಾರದ ಹಿಂದೆಯೇ ಕೊರೊನಾ ವೈರಸ್ ತಡೆಗೆ ತುರ್ತು ಕಾರ್ಯಪಡೆ ರಚಿಸಲಾಗಿತ್ತು. ಅದಾದ ಬಳಿಕ ಹೊರ ದೇಶ ಹಾಗೂ ಹೊರಜಿಲ್ಲೆಗಳಿಂದ ಆಗಮಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಿ ಅವರೆಲ್ಲರೂ ಕನಿಷ್ಟ 14 ದಿನಗಳ ಕಾಲ ಮನೆಯಿಂದ ಹೊರಬರದಂತೆ ಪ್ರತೀ ಮನೆಗೆ ತೆರಳಿ ಮಾಹಿತಿ ನೀಡಲಾಗಿತ್ತು. ನಂತರ ದಿನಸಿ ಅಂಗಡಿ, ತರಕಾರಿ ಅಂಗಡಿಗಳ ಮುಂದೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕ್ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಎರಡನೇ ಬಾರಿಗೆ ಮೈಕ್ ಮೂಲಕ ಜಾಗೃತಿಗೆ ಅನೌನ್ಸ್ ಮಾಡಲಾಯಿತು. ಇದಕ್ಕಾಗಿ ಸ್ಥಳೀಯರೊಬ್ಬರು ಉಚಿತವಾಗಿ ಕಾರಿನ ವ್ಯವಸ್ಥೆಯನ್ನೂ ಮಾಡಿದ್ದರು.

ಗ್ರಾಮೀಣ ರಸ್ತೆಯಲ್ಲಿ ತೆರಳುತ್ತಿರುವ ವೀಡಿಯೋ :

Advertisement

ವಿಶೇಷ ಎಂದರೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚುತ ಅವರ ಧ್ವನಿಯಲ್ಲೇ ಕೊರೊನಾ ಹಾಡೊಂದನ್ನು  ತಯಾರಿಸಿ ಜಾಗೃತಿ ಮೂಡಿಸುವ ಹಾಡನ್ನು  ಬಿತ್ತರಿಸಲಾಯಿತು. ಈ ಹಾಡನ್ನು ವ್ಯಾಟ್ಸಪ್ ಮೂಲಕವೂ ಗ್ರಾಮದ ಜನರಿಗೆ ತಿಳಿಸಲಾಯಿತು. 

ಸುಳ್ಯ ತಾಲೂಕಿನಾದ್ಯಂತ ಇಂತಹ ಮಾದರಿಯ ಜಾಗೃತಿ ಅಗತ್ಯವಾಗಿದೆ. ಈ ಜಾಗೃತಿಯನ್ನು ಗ್ರಾಮದ ಜನರು ಅನುಸರಿಸಿದರೆ ಸುಳ್ಯ ತಾಲೂಕು ಕೊರೊನಾ ವೈರಸ್ ಮುಕ್ತವಾಗಿಸುವತ್ತ ಹೆಜ್ಜೆ ಇಡಬಹುದಾಗಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |
May 25, 2025
9:07 AM
by: ದ ರೂರಲ್ ಮಿರರ್.ಕಾಂ
ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ
May 25, 2025
6:13 AM
by: The Rural Mirror ಸುದ್ದಿಜಾಲ
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ
May 25, 2025
6:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group