Advertisement
ವಿಶೇಷ ವರದಿಗಳು

#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

Share

ಸುಳ್ಯ: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಹಳ್ಳಿ ಹಳ್ಳಿಯಲ್ಲಿ ಕೊರೊನಾ ವೈರಸ್  ಹರಡುವುದು ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ. ಶುಕ್ರವಾರ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಪಿಡಿಒ ಶ್ಯಾಮ ಪ್ರಸಾದ್ ಹಾಗೂ ಗ್ರಾಪಂ ಸದಸ್ಯ ರಾಕೇಶ್ ಮೆಟ್ಟಿನಡ್ಕ ಅವರ ನೇತೃತ್ವದಲ್ಲಿ ಎರಡನೇ ಬಾರಿ ಮೈಕ್ ಮೂಲಕ ಜಾಗೃತಿ ಸಂದೇಶ ನೀಡಲಾಯಿತು. ಸ್ವತ: ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಅವರೇ ಅನೌನ್ಸ್ ಮಾಡುವ ಮೂಲಕ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಹರಡುವುದು  ಮಾತ್ರವಲ್ಲ ಗ್ರಾಮದಲ್ಲಿ  ಒಂದೇ ಒಂದು ಕೊರೊನಾ ವೈರಸ್ ಪ್ರಕರಣ ಕಂಡುಬರಬಾರದು ಎಂಬ ನೆಲೆಯಲ್ಲಿ  ಜಾಗೃತಿ ಹಾಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ವಾರದ ಹಿಂದೆಯೇ ಕೊರೊನಾ ವೈರಸ್ ತಡೆಗೆ ತುರ್ತು ಕಾರ್ಯಪಡೆ ರಚಿಸಲಾಗಿತ್ತು. ಅದಾದ ಬಳಿಕ ಹೊರ ದೇಶ ಹಾಗೂ ಹೊರಜಿಲ್ಲೆಗಳಿಂದ ಆಗಮಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಿ ಅವರೆಲ್ಲರೂ ಕನಿಷ್ಟ 14 ದಿನಗಳ ಕಾಲ ಮನೆಯಿಂದ ಹೊರಬರದಂತೆ ಪ್ರತೀ ಮನೆಗೆ ತೆರಳಿ ಮಾಹಿತಿ ನೀಡಲಾಗಿತ್ತು. ನಂತರ ದಿನಸಿ ಅಂಗಡಿ, ತರಕಾರಿ ಅಂಗಡಿಗಳ ಮುಂದೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕ್ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಎರಡನೇ ಬಾರಿಗೆ ಮೈಕ್ ಮೂಲಕ ಜಾಗೃತಿಗೆ ಅನೌನ್ಸ್ ಮಾಡಲಾಯಿತು. ಇದಕ್ಕಾಗಿ ಸ್ಥಳೀಯರೊಬ್ಬರು ಉಚಿತವಾಗಿ ಕಾರಿನ ವ್ಯವಸ್ಥೆಯನ್ನೂ ಮಾಡಿದ್ದರು.

ಗ್ರಾಮೀಣ ರಸ್ತೆಯಲ್ಲಿ ತೆರಳುತ್ತಿರುವ ವೀಡಿಯೋ :

ವಿಶೇಷ ಎಂದರೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚುತ ಅವರ ಧ್ವನಿಯಲ್ಲೇ ಕೊರೊನಾ ಹಾಡೊಂದನ್ನು  ತಯಾರಿಸಿ ಜಾಗೃತಿ ಮೂಡಿಸುವ ಹಾಡನ್ನು  ಬಿತ್ತರಿಸಲಾಯಿತು. ಈ ಹಾಡನ್ನು ವ್ಯಾಟ್ಸಪ್ ಮೂಲಕವೂ ಗ್ರಾಮದ ಜನರಿಗೆ ತಿಳಿಸಲಾಯಿತು. 

ಸುಳ್ಯ ತಾಲೂಕಿನಾದ್ಯಂತ ಇಂತಹ ಮಾದರಿಯ ಜಾಗೃತಿ ಅಗತ್ಯವಾಗಿದೆ. ಈ ಜಾಗೃತಿಯನ್ನು ಗ್ರಾಮದ ಜನರು ಅನುಸರಿಸಿದರೆ ಸುಳ್ಯ ತಾಲೂಕು ಕೊರೊನಾ ವೈರಸ್ ಮುಕ್ತವಾಗಿಸುವತ್ತ ಹೆಜ್ಜೆ ಇಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

12 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

13 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

13 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

20 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

1 day ago