Advertisement
ವಿಶೇಷ ವರದಿಗಳು

#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

Share

ಸುಳ್ಯ: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಹಳ್ಳಿ ಹಳ್ಳಿಯಲ್ಲಿ ಕೊರೊನಾ ವೈರಸ್  ಹರಡುವುದು ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ. ಶುಕ್ರವಾರ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಪಿಡಿಒ ಶ್ಯಾಮ ಪ್ರಸಾದ್ ಹಾಗೂ ಗ್ರಾಪಂ ಸದಸ್ಯ ರಾಕೇಶ್ ಮೆಟ್ಟಿನಡ್ಕ ಅವರ ನೇತೃತ್ವದಲ್ಲಿ ಎರಡನೇ ಬಾರಿ ಮೈಕ್ ಮೂಲಕ ಜಾಗೃತಿ ಸಂದೇಶ ನೀಡಲಾಯಿತು. ಸ್ವತ: ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಅವರೇ ಅನೌನ್ಸ್ ಮಾಡುವ ಮೂಲಕ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಹರಡುವುದು  ಮಾತ್ರವಲ್ಲ ಗ್ರಾಮದಲ್ಲಿ  ಒಂದೇ ಒಂದು ಕೊರೊನಾ ವೈರಸ್ ಪ್ರಕರಣ ಕಂಡುಬರಬಾರದು ಎಂಬ ನೆಲೆಯಲ್ಲಿ  ಜಾಗೃತಿ ಹಾಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ವಾರದ ಹಿಂದೆಯೇ ಕೊರೊನಾ ವೈರಸ್ ತಡೆಗೆ ತುರ್ತು ಕಾರ್ಯಪಡೆ ರಚಿಸಲಾಗಿತ್ತು. ಅದಾದ ಬಳಿಕ ಹೊರ ದೇಶ ಹಾಗೂ ಹೊರಜಿಲ್ಲೆಗಳಿಂದ ಆಗಮಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಿ ಅವರೆಲ್ಲರೂ ಕನಿಷ್ಟ 14 ದಿನಗಳ ಕಾಲ ಮನೆಯಿಂದ ಹೊರಬರದಂತೆ ಪ್ರತೀ ಮನೆಗೆ ತೆರಳಿ ಮಾಹಿತಿ ನೀಡಲಾಗಿತ್ತು. ನಂತರ ದಿನಸಿ ಅಂಗಡಿ, ತರಕಾರಿ ಅಂಗಡಿಗಳ ಮುಂದೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕ್ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಎರಡನೇ ಬಾರಿಗೆ ಮೈಕ್ ಮೂಲಕ ಜಾಗೃತಿಗೆ ಅನೌನ್ಸ್ ಮಾಡಲಾಯಿತು. ಇದಕ್ಕಾಗಿ ಸ್ಥಳೀಯರೊಬ್ಬರು ಉಚಿತವಾಗಿ ಕಾರಿನ ವ್ಯವಸ್ಥೆಯನ್ನೂ ಮಾಡಿದ್ದರು.

ಗ್ರಾಮೀಣ ರಸ್ತೆಯಲ್ಲಿ ತೆರಳುತ್ತಿರುವ ವೀಡಿಯೋ :

ವಿಶೇಷ ಎಂದರೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚುತ ಅವರ ಧ್ವನಿಯಲ್ಲೇ ಕೊರೊನಾ ಹಾಡೊಂದನ್ನು  ತಯಾರಿಸಿ ಜಾಗೃತಿ ಮೂಡಿಸುವ ಹಾಡನ್ನು  ಬಿತ್ತರಿಸಲಾಯಿತು. ಈ ಹಾಡನ್ನು ವ್ಯಾಟ್ಸಪ್ ಮೂಲಕವೂ ಗ್ರಾಮದ ಜನರಿಗೆ ತಿಳಿಸಲಾಯಿತು. 

ಸುಳ್ಯ ತಾಲೂಕಿನಾದ್ಯಂತ ಇಂತಹ ಮಾದರಿಯ ಜಾಗೃತಿ ಅಗತ್ಯವಾಗಿದೆ. ಈ ಜಾಗೃತಿಯನ್ನು ಗ್ರಾಮದ ಜನರು ಅನುಸರಿಸಿದರೆ ಸುಳ್ಯ ತಾಲೂಕು ಕೊರೊನಾ ವೈರಸ್ ಮುಕ್ತವಾಗಿಸುವತ್ತ ಹೆಜ್ಜೆ ಇಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

5 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

10 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

19 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

20 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago