Advertisement
ವಿಶೇಷ ವರದಿಗಳು

#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

Share

ಸುಳ್ಯ: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಹಳ್ಳಿ ಹಳ್ಳಿಯಲ್ಲಿ ಕೊರೊನಾ ವೈರಸ್  ಹರಡುವುದು ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ. ಶುಕ್ರವಾರ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಪಿಡಿಒ ಶ್ಯಾಮ ಪ್ರಸಾದ್ ಹಾಗೂ ಗ್ರಾಪಂ ಸದಸ್ಯ ರಾಕೇಶ್ ಮೆಟ್ಟಿನಡ್ಕ ಅವರ ನೇತೃತ್ವದಲ್ಲಿ ಎರಡನೇ ಬಾರಿ ಮೈಕ್ ಮೂಲಕ ಜಾಗೃತಿ ಸಂದೇಶ ನೀಡಲಾಯಿತು. ಸ್ವತ: ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಅವರೇ ಅನೌನ್ಸ್ ಮಾಡುವ ಮೂಲಕ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಹರಡುವುದು  ಮಾತ್ರವಲ್ಲ ಗ್ರಾಮದಲ್ಲಿ  ಒಂದೇ ಒಂದು ಕೊರೊನಾ ವೈರಸ್ ಪ್ರಕರಣ ಕಂಡುಬರಬಾರದು ಎಂಬ ನೆಲೆಯಲ್ಲಿ  ಜಾಗೃತಿ ಹಾಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ವಾರದ ಹಿಂದೆಯೇ ಕೊರೊನಾ ವೈರಸ್ ತಡೆಗೆ ತುರ್ತು ಕಾರ್ಯಪಡೆ ರಚಿಸಲಾಗಿತ್ತು. ಅದಾದ ಬಳಿಕ ಹೊರ ದೇಶ ಹಾಗೂ ಹೊರಜಿಲ್ಲೆಗಳಿಂದ ಆಗಮಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಿ ಅವರೆಲ್ಲರೂ ಕನಿಷ್ಟ 14 ದಿನಗಳ ಕಾಲ ಮನೆಯಿಂದ ಹೊರಬರದಂತೆ ಪ್ರತೀ ಮನೆಗೆ ತೆರಳಿ ಮಾಹಿತಿ ನೀಡಲಾಗಿತ್ತು. ನಂತರ ದಿನಸಿ ಅಂಗಡಿ, ತರಕಾರಿ ಅಂಗಡಿಗಳ ಮುಂದೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕ್ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಎರಡನೇ ಬಾರಿಗೆ ಮೈಕ್ ಮೂಲಕ ಜಾಗೃತಿಗೆ ಅನೌನ್ಸ್ ಮಾಡಲಾಯಿತು. ಇದಕ್ಕಾಗಿ ಸ್ಥಳೀಯರೊಬ್ಬರು ಉಚಿತವಾಗಿ ಕಾರಿನ ವ್ಯವಸ್ಥೆಯನ್ನೂ ಮಾಡಿದ್ದರು.

ಗ್ರಾಮೀಣ ರಸ್ತೆಯಲ್ಲಿ ತೆರಳುತ್ತಿರುವ ವೀಡಿಯೋ :

ವಿಶೇಷ ಎಂದರೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚುತ ಅವರ ಧ್ವನಿಯಲ್ಲೇ ಕೊರೊನಾ ಹಾಡೊಂದನ್ನು  ತಯಾರಿಸಿ ಜಾಗೃತಿ ಮೂಡಿಸುವ ಹಾಡನ್ನು  ಬಿತ್ತರಿಸಲಾಯಿತು. ಈ ಹಾಡನ್ನು ವ್ಯಾಟ್ಸಪ್ ಮೂಲಕವೂ ಗ್ರಾಮದ ಜನರಿಗೆ ತಿಳಿಸಲಾಯಿತು. 

ಸುಳ್ಯ ತಾಲೂಕಿನಾದ್ಯಂತ ಇಂತಹ ಮಾದರಿಯ ಜಾಗೃತಿ ಅಗತ್ಯವಾಗಿದೆ. ಈ ಜಾಗೃತಿಯನ್ನು ಗ್ರಾಮದ ಜನರು ಅನುಸರಿಸಿದರೆ ಸುಳ್ಯ ತಾಲೂಕು ಕೊರೊನಾ ವೈರಸ್ ಮುಕ್ತವಾಗಿಸುವತ್ತ ಹೆಜ್ಜೆ ಇಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

3 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago