Advertisement
ವಿಶೇಷ ವರದಿಗಳು

#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

Share

ಸುಳ್ಯ: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಹಳ್ಳಿ ಹಳ್ಳಿಯಲ್ಲಿ ಕೊರೊನಾ ವೈರಸ್  ಹರಡುವುದು ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ. ಶುಕ್ರವಾರ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಪಿಡಿಒ ಶ್ಯಾಮ ಪ್ರಸಾದ್ ಹಾಗೂ ಗ್ರಾಪಂ ಸದಸ್ಯ ರಾಕೇಶ್ ಮೆಟ್ಟಿನಡ್ಕ ಅವರ ನೇತೃತ್ವದಲ್ಲಿ ಎರಡನೇ ಬಾರಿ ಮೈಕ್ ಮೂಲಕ ಜಾಗೃತಿ ಸಂದೇಶ ನೀಡಲಾಯಿತು. ಸ್ವತ: ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಅವರೇ ಅನೌನ್ಸ್ ಮಾಡುವ ಮೂಲಕ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಹರಡುವುದು  ಮಾತ್ರವಲ್ಲ ಗ್ರಾಮದಲ್ಲಿ  ಒಂದೇ ಒಂದು ಕೊರೊನಾ ವೈರಸ್ ಪ್ರಕರಣ ಕಂಡುಬರಬಾರದು ಎಂಬ ನೆಲೆಯಲ್ಲಿ  ಜಾಗೃತಿ ಹಾಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ವಾರದ ಹಿಂದೆಯೇ ಕೊರೊನಾ ವೈರಸ್ ತಡೆಗೆ ತುರ್ತು ಕಾರ್ಯಪಡೆ ರಚಿಸಲಾಗಿತ್ತು. ಅದಾದ ಬಳಿಕ ಹೊರ ದೇಶ ಹಾಗೂ ಹೊರಜಿಲ್ಲೆಗಳಿಂದ ಆಗಮಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಿ ಅವರೆಲ್ಲರೂ ಕನಿಷ್ಟ 14 ದಿನಗಳ ಕಾಲ ಮನೆಯಿಂದ ಹೊರಬರದಂತೆ ಪ್ರತೀ ಮನೆಗೆ ತೆರಳಿ ಮಾಹಿತಿ ನೀಡಲಾಗಿತ್ತು. ನಂತರ ದಿನಸಿ ಅಂಗಡಿ, ತರಕಾರಿ ಅಂಗಡಿಗಳ ಮುಂದೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕ್ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಎರಡನೇ ಬಾರಿಗೆ ಮೈಕ್ ಮೂಲಕ ಜಾಗೃತಿಗೆ ಅನೌನ್ಸ್ ಮಾಡಲಾಯಿತು. ಇದಕ್ಕಾಗಿ ಸ್ಥಳೀಯರೊಬ್ಬರು ಉಚಿತವಾಗಿ ಕಾರಿನ ವ್ಯವಸ್ಥೆಯನ್ನೂ ಮಾಡಿದ್ದರು.

ಗ್ರಾಮೀಣ ರಸ್ತೆಯಲ್ಲಿ ತೆರಳುತ್ತಿರುವ ವೀಡಿಯೋ :

ವಿಶೇಷ ಎಂದರೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚುತ ಅವರ ಧ್ವನಿಯಲ್ಲೇ ಕೊರೊನಾ ಹಾಡೊಂದನ್ನು  ತಯಾರಿಸಿ ಜಾಗೃತಿ ಮೂಡಿಸುವ ಹಾಡನ್ನು  ಬಿತ್ತರಿಸಲಾಯಿತು. ಈ ಹಾಡನ್ನು ವ್ಯಾಟ್ಸಪ್ ಮೂಲಕವೂ ಗ್ರಾಮದ ಜನರಿಗೆ ತಿಳಿಸಲಾಯಿತು. 

ಸುಳ್ಯ ತಾಲೂಕಿನಾದ್ಯಂತ ಇಂತಹ ಮಾದರಿಯ ಜಾಗೃತಿ ಅಗತ್ಯವಾಗಿದೆ. ಈ ಜಾಗೃತಿಯನ್ನು ಗ್ರಾಮದ ಜನರು ಅನುಸರಿಸಿದರೆ ಸುಳ್ಯ ತಾಲೂಕು ಕೊರೊನಾ ವೈರಸ್ ಮುಕ್ತವಾಗಿಸುವತ್ತ ಹೆಜ್ಜೆ ಇಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago