ಮಂಗಳೂರು: ಸಾಕಷ್ಟು ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಂದು ಕೂಡ ಯಾವುದೇ ಕೊರೊನಾ ಸೋಂಕು ಪ್ರಕರಣದಲ್ಲಿ ಪಾಸಿಟಿವ್ ಬಂದಿಲ್ಲ. ಗುರುವಾರದಂದು 46 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ಆ ಮೂಲಕ ಗುರುವಾರದ ತನಕ ಒಟ್ಟು 38051 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ದೊರೆತಿರುವ ಪರೀಕ್ಷಾ ಎಲ್ಲಾ 9 ವರದಿಗಳು ನೆಗೆಟಿವ್ ಆಗಿತ್ತು.
ಆದರೆ ರಾಜ್ಯದಲ್ಲಿ ಗುರುವಾರ ಕೂಡಾ 4 ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 55 ಪ್ರಕರಣ ದಾಖಲಾಗಿದೆ. ದೇಶದಲ್ಲಿ ಗುರುವಾರದಂದು ಒಟ್ಟು 62 ಹೊಸ ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 719 ಪ್ರಕರಣ ದಾಖಲಾದಂತಾಗಿದೆ. ಇದರಲ್ಲಿ 45 ಮಂದಿ ಗುಣಮುಖರಾಗಿದ್ದು ಸದ್ಯ 658 ಮಂದಿ ಕೊರೊನಾ ವೈರಸ್ ಸೋಂಕಿತರು ಇದ್ದಾರೆ.
ಚೀನಾದಲ್ಲಿ ಗುರುವಾರ 67 ಹೊಸ ಪ್ರಕರಣ ಪತ್ತೆಯಾದರೆ ಅಮೇರಿಕಾದಲ್ಲಿ 6858 ಹೊಸ ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ದೇಶದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ.ಇತರ ದೇಶಕ್ಕೆ ಹೋಲಿಸಿದರೆ ಭಾರತ ಈಗ 41 ನೇ ಸ್ಥಾನದಲ್ಲಿ ಇದೆ. ಭಾರತದಲ್ಲಿ ಈಗ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಮುಂದಿನ 14 ದಿನಗಳಲ್ಲಿ ದೇಶದ ಜನತೆ ನೆಮ್ಮದಿಯ ನಿಟ್ಟಿಸಿರು ಬಿಡಬಹುದು ಎನ್ನುವ ಆಶಾವಾದ ಇದೆ. ಹೀಗಾಗಿ ಈಗ ಜನತೆಯು ಸರಕಾರ ಕೈಗೊಂಡಿರುವ ಲಾಕ್ ಡೌನ್ ಪಾಲನೆ ಮಾಡಿದರೆ ನೆಮ್ಮದಿಯ ದಿನಗಳು ದೇಶದ್ದಾಗಲಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…