ಮಂಗಳೂರು: ಸಾಕಷ್ಟು ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಂದು ಕೂಡ ಯಾವುದೇ ಕೊರೊನಾ ಸೋಂಕು ಪ್ರಕರಣದಲ್ಲಿ ಪಾಸಿಟಿವ್ ಬಂದಿಲ್ಲ. ಗುರುವಾರದಂದು 46 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ಆ ಮೂಲಕ ಗುರುವಾರದ ತನಕ ಒಟ್ಟು 38051 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ದೊರೆತಿರುವ ಪರೀಕ್ಷಾ ಎಲ್ಲಾ 9 ವರದಿಗಳು ನೆಗೆಟಿವ್ ಆಗಿತ್ತು.
ಆದರೆ ರಾಜ್ಯದಲ್ಲಿ ಗುರುವಾರ ಕೂಡಾ 4 ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 55 ಪ್ರಕರಣ ದಾಖಲಾಗಿದೆ. ದೇಶದಲ್ಲಿ ಗುರುವಾರದಂದು ಒಟ್ಟು 62 ಹೊಸ ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 719 ಪ್ರಕರಣ ದಾಖಲಾದಂತಾಗಿದೆ. ಇದರಲ್ಲಿ 45 ಮಂದಿ ಗುಣಮುಖರಾಗಿದ್ದು ಸದ್ಯ 658 ಮಂದಿ ಕೊರೊನಾ ವೈರಸ್ ಸೋಂಕಿತರು ಇದ್ದಾರೆ.
ಚೀನಾದಲ್ಲಿ ಗುರುವಾರ 67 ಹೊಸ ಪ್ರಕರಣ ಪತ್ತೆಯಾದರೆ ಅಮೇರಿಕಾದಲ್ಲಿ 6858 ಹೊಸ ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ದೇಶದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ.ಇತರ ದೇಶಕ್ಕೆ ಹೋಲಿಸಿದರೆ ಭಾರತ ಈಗ 41 ನೇ ಸ್ಥಾನದಲ್ಲಿ ಇದೆ. ಭಾರತದಲ್ಲಿ ಈಗ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಮುಂದಿನ 14 ದಿನಗಳಲ್ಲಿ ದೇಶದ ಜನತೆ ನೆಮ್ಮದಿಯ ನಿಟ್ಟಿಸಿರು ಬಿಡಬಹುದು ಎನ್ನುವ ಆಶಾವಾದ ಇದೆ. ಹೀಗಾಗಿ ಈಗ ಜನತೆಯು ಸರಕಾರ ಕೈಗೊಂಡಿರುವ ಲಾಕ್ ಡೌನ್ ಪಾಲನೆ ಮಾಡಿದರೆ ನೆಮ್ಮದಿಯ ದಿನಗಳು ದೇಶದ್ದಾಗಲಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…