ಮಂಗಳೂರು: ಸಾಕಷ್ಟು ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಂದು ಕೂಡ ಯಾವುದೇ ಕೊರೊನಾ ಸೋಂಕು ಪ್ರಕರಣದಲ್ಲಿ ಪಾಸಿಟಿವ್ ಬಂದಿಲ್ಲ. ಗುರುವಾರದಂದು 46 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ಆ ಮೂಲಕ ಗುರುವಾರದ ತನಕ ಒಟ್ಟು 38051 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ದೊರೆತಿರುವ ಪರೀಕ್ಷಾ ಎಲ್ಲಾ 9 ವರದಿಗಳು ನೆಗೆಟಿವ್ ಆಗಿತ್ತು.
ಆದರೆ ರಾಜ್ಯದಲ್ಲಿ ಗುರುವಾರ ಕೂಡಾ 4 ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 55 ಪ್ರಕರಣ ದಾಖಲಾಗಿದೆ. ದೇಶದಲ್ಲಿ ಗುರುವಾರದಂದು ಒಟ್ಟು 62 ಹೊಸ ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 719 ಪ್ರಕರಣ ದಾಖಲಾದಂತಾಗಿದೆ. ಇದರಲ್ಲಿ 45 ಮಂದಿ ಗುಣಮುಖರಾಗಿದ್ದು ಸದ್ಯ 658 ಮಂದಿ ಕೊರೊನಾ ವೈರಸ್ ಸೋಂಕಿತರು ಇದ್ದಾರೆ.
ಚೀನಾದಲ್ಲಿ ಗುರುವಾರ 67 ಹೊಸ ಪ್ರಕರಣ ಪತ್ತೆಯಾದರೆ ಅಮೇರಿಕಾದಲ್ಲಿ 6858 ಹೊಸ ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ದೇಶದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ.ಇತರ ದೇಶಕ್ಕೆ ಹೋಲಿಸಿದರೆ ಭಾರತ ಈಗ 41 ನೇ ಸ್ಥಾನದಲ್ಲಿ ಇದೆ. ಭಾರತದಲ್ಲಿ ಈಗ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಮುಂದಿನ 14 ದಿನಗಳಲ್ಲಿ ದೇಶದ ಜನತೆ ನೆಮ್ಮದಿಯ ನಿಟ್ಟಿಸಿರು ಬಿಡಬಹುದು ಎನ್ನುವ ಆಶಾವಾದ ಇದೆ. ಹೀಗಾಗಿ ಈಗ ಜನತೆಯು ಸರಕಾರ ಕೈಗೊಂಡಿರುವ ಲಾಕ್ ಡೌನ್ ಪಾಲನೆ ಮಾಡಿದರೆ ನೆಮ್ಮದಿಯ ದಿನಗಳು ದೇಶದ್ದಾಗಲಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…