ಮಂಗಳೂರು: ಸಾಕಷ್ಟು ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಂದು ಕೂಡ ಯಾವುದೇ ಕೊರೊನಾ ಸೋಂಕು ಪ್ರಕರಣದಲ್ಲಿ ಪಾಸಿಟಿವ್ ಬಂದಿಲ್ಲ. ಗುರುವಾರದಂದು 46 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ಆ ಮೂಲಕ ಗುರುವಾರದ ತನಕ ಒಟ್ಟು 38051 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ದೊರೆತಿರುವ ಪರೀಕ್ಷಾ ಎಲ್ಲಾ 9 ವರದಿಗಳು ನೆಗೆಟಿವ್ ಆಗಿತ್ತು.
ಆದರೆ ರಾಜ್ಯದಲ್ಲಿ ಗುರುವಾರ ಕೂಡಾ 4 ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 55 ಪ್ರಕರಣ ದಾಖಲಾಗಿದೆ. ದೇಶದಲ್ಲಿ ಗುರುವಾರದಂದು ಒಟ್ಟು 62 ಹೊಸ ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 719 ಪ್ರಕರಣ ದಾಖಲಾದಂತಾಗಿದೆ. ಇದರಲ್ಲಿ 45 ಮಂದಿ ಗುಣಮುಖರಾಗಿದ್ದು ಸದ್ಯ 658 ಮಂದಿ ಕೊರೊನಾ ವೈರಸ್ ಸೋಂಕಿತರು ಇದ್ದಾರೆ.
ಚೀನಾದಲ್ಲಿ ಗುರುವಾರ 67 ಹೊಸ ಪ್ರಕರಣ ಪತ್ತೆಯಾದರೆ ಅಮೇರಿಕಾದಲ್ಲಿ 6858 ಹೊಸ ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ದೇಶದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ.ಇತರ ದೇಶಕ್ಕೆ ಹೋಲಿಸಿದರೆ ಭಾರತ ಈಗ 41 ನೇ ಸ್ಥಾನದಲ್ಲಿ ಇದೆ. ಭಾರತದಲ್ಲಿ ಈಗ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಮುಂದಿನ 14 ದಿನಗಳಲ್ಲಿ ದೇಶದ ಜನತೆ ನೆಮ್ಮದಿಯ ನಿಟ್ಟಿಸಿರು ಬಿಡಬಹುದು ಎನ್ನುವ ಆಶಾವಾದ ಇದೆ. ಹೀಗಾಗಿ ಈಗ ಜನತೆಯು ಸರಕಾರ ಕೈಗೊಂಡಿರುವ ಲಾಕ್ ಡೌನ್ ಪಾಲನೆ ಮಾಡಿದರೆ ನೆಮ್ಮದಿಯ ದಿನಗಳು ದೇಶದ್ದಾಗಲಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…