ಮಂಗಳೂರು: ಸಾಕಷ್ಟು ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಂದು ಕೂಡ ಯಾವುದೇ ಕೊರೊನಾ ಸೋಂಕು ಪ್ರಕರಣದಲ್ಲಿ ಪಾಸಿಟಿವ್ ಬಂದಿಲ್ಲ. ಗುರುವಾರದಂದು 46 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ಆ ಮೂಲಕ ಗುರುವಾರದ ತನಕ ಒಟ್ಟು 38051 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ದೊರೆತಿರುವ ಪರೀಕ್ಷಾ ಎಲ್ಲಾ 9 ವರದಿಗಳು ನೆಗೆಟಿವ್ ಆಗಿತ್ತು.
ಆದರೆ ರಾಜ್ಯದಲ್ಲಿ ಗುರುವಾರ ಕೂಡಾ 4 ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 55 ಪ್ರಕರಣ ದಾಖಲಾಗಿದೆ. ದೇಶದಲ್ಲಿ ಗುರುವಾರದಂದು ಒಟ್ಟು 62 ಹೊಸ ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 719 ಪ್ರಕರಣ ದಾಖಲಾದಂತಾಗಿದೆ. ಇದರಲ್ಲಿ 45 ಮಂದಿ ಗುಣಮುಖರಾಗಿದ್ದು ಸದ್ಯ 658 ಮಂದಿ ಕೊರೊನಾ ವೈರಸ್ ಸೋಂಕಿತರು ಇದ್ದಾರೆ.
ಚೀನಾದಲ್ಲಿ ಗುರುವಾರ 67 ಹೊಸ ಪ್ರಕರಣ ಪತ್ತೆಯಾದರೆ ಅಮೇರಿಕಾದಲ್ಲಿ 6858 ಹೊಸ ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ದೇಶದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ.ಇತರ ದೇಶಕ್ಕೆ ಹೋಲಿಸಿದರೆ ಭಾರತ ಈಗ 41 ನೇ ಸ್ಥಾನದಲ್ಲಿ ಇದೆ. ಭಾರತದಲ್ಲಿ ಈಗ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಮುಂದಿನ 14 ದಿನಗಳಲ್ಲಿ ದೇಶದ ಜನತೆ ನೆಮ್ಮದಿಯ ನಿಟ್ಟಿಸಿರು ಬಿಡಬಹುದು ಎನ್ನುವ ಆಶಾವಾದ ಇದೆ. ಹೀಗಾಗಿ ಈಗ ಜನತೆಯು ಸರಕಾರ ಕೈಗೊಂಡಿರುವ ಲಾಕ್ ಡೌನ್ ಪಾಲನೆ ಮಾಡಿದರೆ ನೆಮ್ಮದಿಯ ದಿನಗಳು ದೇಶದ್ದಾಗಲಿದೆ.
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…