ಮಂಗಳೂರು: ಸಾಕಷ್ಟು ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಂದು ಕೂಡ ಯಾವುದೇ ಕೊರೊನಾ ಸೋಂಕು ಪ್ರಕರಣದಲ್ಲಿ ಪಾಸಿಟಿವ್ ಬಂದಿಲ್ಲ. ಗುರುವಾರದಂದು 46 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ಆ ಮೂಲಕ ಗುರುವಾರದ ತನಕ ಒಟ್ಟು 38051 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ದೊರೆತಿರುವ ಪರೀಕ್ಷಾ ಎಲ್ಲಾ 9 ವರದಿಗಳು ನೆಗೆಟಿವ್ ಆಗಿತ್ತು.
ಆದರೆ ರಾಜ್ಯದಲ್ಲಿ ಗುರುವಾರ ಕೂಡಾ 4 ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 55 ಪ್ರಕರಣ ದಾಖಲಾಗಿದೆ. ದೇಶದಲ್ಲಿ ಗುರುವಾರದಂದು ಒಟ್ಟು 62 ಹೊಸ ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 719 ಪ್ರಕರಣ ದಾಖಲಾದಂತಾಗಿದೆ. ಇದರಲ್ಲಿ 45 ಮಂದಿ ಗುಣಮುಖರಾಗಿದ್ದು ಸದ್ಯ 658 ಮಂದಿ ಕೊರೊನಾ ವೈರಸ್ ಸೋಂಕಿತರು ಇದ್ದಾರೆ.
ಚೀನಾದಲ್ಲಿ ಗುರುವಾರ 67 ಹೊಸ ಪ್ರಕರಣ ಪತ್ತೆಯಾದರೆ ಅಮೇರಿಕಾದಲ್ಲಿ 6858 ಹೊಸ ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ದೇಶದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ.ಇತರ ದೇಶಕ್ಕೆ ಹೋಲಿಸಿದರೆ ಭಾರತ ಈಗ 41 ನೇ ಸ್ಥಾನದಲ್ಲಿ ಇದೆ. ಭಾರತದಲ್ಲಿ ಈಗ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಮುಂದಿನ 14 ದಿನಗಳಲ್ಲಿ ದೇಶದ ಜನತೆ ನೆಮ್ಮದಿಯ ನಿಟ್ಟಿಸಿರು ಬಿಡಬಹುದು ಎನ್ನುವ ಆಶಾವಾದ ಇದೆ. ಹೀಗಾಗಿ ಈಗ ಜನತೆಯು ಸರಕಾರ ಕೈಗೊಂಡಿರುವ ಲಾಕ್ ಡೌನ್ ಪಾಲನೆ ಮಾಡಿದರೆ ನೆಮ್ಮದಿಯ ದಿನಗಳು ದೇಶದ್ದಾಗಲಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…