Advertisement
The Rural Mirror ಕಾಳಜಿ

ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಆದರೆ ಮುಗಿಯುವುದಿಲ್ಲ | ಈಗ ಬೇಕಾದ್ದು ಸಾಮಾಜಿಕ ಅಂತರ | ಸಾಕಷ್ಟು ಮುಂಜಾಗ್ರತೆ

Share

ಕೊರೊನಾ ವೈರಸ್ ಹರಡುವುದು ತಡೆಗೆ ವಿವಿಧ ಪ್ರಯತ್ನ ಮಾಡಲಾಗುತ್ತಿದೆ. ಎರಡು ದಿನಗಳ ಹಿಂದೆ ಜನತಾ ಕರ್ಫ್ಯೂ ಆಚರಿಸಲಾಯಿತು. ಅದಾದ ಬಳಿಕ ಮಾ.31 ರವರೆಗೆ ಲಾಕ್ ಡೌನ್ ಎಂದೂ ಹೇಳಲಾಯಿತು. ಅದಾದ ಮರುದಿನವೇ ನೋಡಿದರೆ ಅಂಗಡಿಗಳಲ್ಲಿ, ಹಾಲು ಖರೀದಿಯಲ್ಲಿ, ಎಲ್ಲೆಂದರಲ್ಲಿ  ಜನ ಮುಗಿಬಿದ್ದಿದ್ದಾರೆ. ಎಲ್ಲಾ ಜಾಗೃತಿಯ ಜೊತೆಗೆ ಪ್ರಮುಖವಾಗಿ ಈಗ ಆಗಬೇಕಾದ್ದು ಲಾಕ್ ಡೌನ್ ಜೊತೆಗೆ ಸಾಮಾಜಿಕ ಅಂತರ. ಆಗಾಗ ಸ್ವಚ್ಛತೆ.

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನ ವರದಿ ಕೂಡಾ ಇದನ್ನೇ ಹೇಳಿದೆ, ಭಾರತದಲ್ಲಿ ಕೊರೊನಾ ವೈರಸ್  ಹರಡುವಿಕೆ ತಡೆಗಟ್ಟಲು ಸಾಮಾಜಿಕ ಅಂತರವೇ ಪ್ರಮುಖ ಪರಿಹಾರ. ಇದರ ಹೊರತಾಗಿ  ಬೇರೆ ದಾರಿ ಇಲ್ಲ. ಇದು ತಪ್ಪಿದರೆ  ಭಾರತದಂತಹ  ದೇಶ ಅತ್ಯಂತ ಅಪಾಯಕಾರಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಈಗ ಕೊರೊನಾ ವೈರಸ್ ಹರಡುವುದು ತಡೆಯುವಲ್ಲಿ  ಪ್ರತಿಯೊಬ್ಬನ ಜವಾಬ್ದಾರಿ ಇದೆ. ಸರಕಾರದಿಂದ , ಯಾವುದೇ ಅಧಿಕಾರಿಯಿಂದ, ಪೊಲೀಸರಿಂದ , ಸ್ವಯಂಸೇವಾ ಸಂಸ್ಥೆಗಳಿಂದ ಸಾದ್ಯವಿಲ್ಲ, ಪ್ರತೀ ವ್ಯಕ್ತಿ ಜಾಗೃತವಾದರೆ, ಜವಾಬ್ದಾರಿಯಿಂದ ಕೆಲಸ ಮಾಡಿದರೆ ಮಾತ್ರವೇ ವೈರಸ್ ಹರಡುವುದು  ತಡೆಯಲು ಸಾಧ್ಯವಿದೆ. ಒಂದು ವೇಳೆ ದೇಶದ ಆರೋಗ್ಯ ಸೇವೆಯಲ್ಲಿನ  ಇಂತಹ ತುರ್ತು ಪರಿಸ್ಥಿಯನ್ನು ಜನರಿಗೆ ನಿಭಾಯಿಸಲಾಗದೇ ಹೋದರೆ ,ವಿಷಮ ಪರಿಸ್ಥಿತಿಗೆ ತಲುಪುವ ಅಪಾಯವಿದೆ ಎಂದೂ ಅಧ್ಯಯನ ವರದಿ ಎಚ್ಚರಿಸಿದೆ.

ಸೋಂಕಿತ ವ್ಯಕ್ತಿಯನ್ನು ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡುವುದು  ಒಂದು ದಾರಿಯಾದರೆ ಉಳಿದವರು ಅಂತರ ಕಾಯ್ದುಕೊಳ್ಳುವುದು ಇನ್ನೊಂದು ದಾರಿ. ಚೀನಾ, ಇಟಲಿಯ ಮಾದರಿಯಲ್ಲಿ ಈ ವೈರಸ್ ಭಾರತದಲ್ಲೂ ಮುಂದೆ ಹರಡಿದರೆ ನಿಯಂತ್ರವೇ ಅಸಾಧ್ಯ ಎಂದು ವೈದ್ಯ ಪರಿಷತ್ತು ಆತಂಕ ವ್ಯಕ್ತಪಡಿಸಿದೆ. ಹೀಗಾಗಿ ಈಗಿನ ಎಲ್ಲಾ ಕ್ರಮಗಳು ಭವಿಷ್ಯ ನಿರ್ಧಾರ ಮಾಡುವುದೇ ಆಗಿದೆ.

ಸಂಶೋಧನೆಗಳ ಪ್ರಕಾರ ವೈರಸ್ ಹರಡುವಿಕೆಯ ಪ್ರಮಾಣ ಈಗ ಹೆಚ್ಚುತ್ತಿದೆ. ಆರಂಭದಲ್ಲಿ  ಒಬ್ಬ ಸೋಂಕಿತ ವ್ಯಕ್ತಿಯಿಂದ ಸರಿಸುಮಾರು 2 ರಿಂದ 5 ಮಂದಿಗೆ  ಹರಡುವ ಸಾಧ್ಯತೆಗಳಿವೆ. ಮುಂದಿನ ಹಂತದಲ್ಲಿ 2 ರಿಂದ 5 ಮಂದಿಗೆ ಹರಡುವ ಸಾಧ್ಯತೆ ಇದೆ. ಇದು ತೀರಾ ಅಪಾಯಕಾರಿ ಸನ್ನಿವೇಶ. ಈ ನಿಟ್ಟಿನಲ್ಲಿ ತುರ್ತು ಕ್ರಮ ಅಗತ್ಯವಾಗುತ್ತದೆ. ಹೀಗಾಗಿ ಕೊರೊನಾ ವೈರಸ್‌ ಸೋಂಕಿನ ಲಕ್ಷಣಗಳನ್ನು ಹೊಂದಿರುವವರಿಂದ ಅಂತರ ಕಾಯ್ದುಕೊಂಡರೆ ಹೊಸ ಪ್ರಕರಣಗಳು ಕಡಿಮೆಯಾಗಬಹುದು. ಈ ನಿಯಮ ಪಾಲಿಸಿದರೆ ಭಾರತ ಸುರಕ್ಷಿತವಾಗಬಲ್ಲುದು ಎಂದು ಸಂಶೋಧನೆ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ

ಯುಗಾದಿ ಹಬ್ಬವು ಕೇವಲ ಹೊಸ ವರ್ಷದ ಆರಂಭವಲ್ಲ; ಅದು ಕಾಲತತ್ತ್ವ, ಪ್ರಕೃತಿ ಚಕ್ರ…

5 hours ago

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

24 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

1 day ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

1 day ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

1 day ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

2 days ago