Advertisement
The Rural Mirror ಕಾಳಜಿ

ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಆದರೆ ಮುಗಿಯುವುದಿಲ್ಲ | ಈಗ ಬೇಕಾದ್ದು ಸಾಮಾಜಿಕ ಅಂತರ | ಸಾಕಷ್ಟು ಮುಂಜಾಗ್ರತೆ

Share

ಕೊರೊನಾ ವೈರಸ್ ಹರಡುವುದು ತಡೆಗೆ ವಿವಿಧ ಪ್ರಯತ್ನ ಮಾಡಲಾಗುತ್ತಿದೆ. ಎರಡು ದಿನಗಳ ಹಿಂದೆ ಜನತಾ ಕರ್ಫ್ಯೂ ಆಚರಿಸಲಾಯಿತು. ಅದಾದ ಬಳಿಕ ಮಾ.31 ರವರೆಗೆ ಲಾಕ್ ಡೌನ್ ಎಂದೂ ಹೇಳಲಾಯಿತು. ಅದಾದ ಮರುದಿನವೇ ನೋಡಿದರೆ ಅಂಗಡಿಗಳಲ್ಲಿ, ಹಾಲು ಖರೀದಿಯಲ್ಲಿ, ಎಲ್ಲೆಂದರಲ್ಲಿ  ಜನ ಮುಗಿಬಿದ್ದಿದ್ದಾರೆ. ಎಲ್ಲಾ ಜಾಗೃತಿಯ ಜೊತೆಗೆ ಪ್ರಮುಖವಾಗಿ ಈಗ ಆಗಬೇಕಾದ್ದು ಲಾಕ್ ಡೌನ್ ಜೊತೆಗೆ ಸಾಮಾಜಿಕ ಅಂತರ. ಆಗಾಗ ಸ್ವಚ್ಛತೆ.

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನ ವರದಿ ಕೂಡಾ ಇದನ್ನೇ ಹೇಳಿದೆ, ಭಾರತದಲ್ಲಿ ಕೊರೊನಾ ವೈರಸ್  ಹರಡುವಿಕೆ ತಡೆಗಟ್ಟಲು ಸಾಮಾಜಿಕ ಅಂತರವೇ ಪ್ರಮುಖ ಪರಿಹಾರ. ಇದರ ಹೊರತಾಗಿ  ಬೇರೆ ದಾರಿ ಇಲ್ಲ. ಇದು ತಪ್ಪಿದರೆ  ಭಾರತದಂತಹ  ದೇಶ ಅತ್ಯಂತ ಅಪಾಯಕಾರಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಈಗ ಕೊರೊನಾ ವೈರಸ್ ಹರಡುವುದು ತಡೆಯುವಲ್ಲಿ  ಪ್ರತಿಯೊಬ್ಬನ ಜವಾಬ್ದಾರಿ ಇದೆ. ಸರಕಾರದಿಂದ , ಯಾವುದೇ ಅಧಿಕಾರಿಯಿಂದ, ಪೊಲೀಸರಿಂದ , ಸ್ವಯಂಸೇವಾ ಸಂಸ್ಥೆಗಳಿಂದ ಸಾದ್ಯವಿಲ್ಲ, ಪ್ರತೀ ವ್ಯಕ್ತಿ ಜಾಗೃತವಾದರೆ, ಜವಾಬ್ದಾರಿಯಿಂದ ಕೆಲಸ ಮಾಡಿದರೆ ಮಾತ್ರವೇ ವೈರಸ್ ಹರಡುವುದು  ತಡೆಯಲು ಸಾಧ್ಯವಿದೆ. ಒಂದು ವೇಳೆ ದೇಶದ ಆರೋಗ್ಯ ಸೇವೆಯಲ್ಲಿನ  ಇಂತಹ ತುರ್ತು ಪರಿಸ್ಥಿಯನ್ನು ಜನರಿಗೆ ನಿಭಾಯಿಸಲಾಗದೇ ಹೋದರೆ ,ವಿಷಮ ಪರಿಸ್ಥಿತಿಗೆ ತಲುಪುವ ಅಪಾಯವಿದೆ ಎಂದೂ ಅಧ್ಯಯನ ವರದಿ ಎಚ್ಚರಿಸಿದೆ.

ಸೋಂಕಿತ ವ್ಯಕ್ತಿಯನ್ನು ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡುವುದು  ಒಂದು ದಾರಿಯಾದರೆ ಉಳಿದವರು ಅಂತರ ಕಾಯ್ದುಕೊಳ್ಳುವುದು ಇನ್ನೊಂದು ದಾರಿ. ಚೀನಾ, ಇಟಲಿಯ ಮಾದರಿಯಲ್ಲಿ ಈ ವೈರಸ್ ಭಾರತದಲ್ಲೂ ಮುಂದೆ ಹರಡಿದರೆ ನಿಯಂತ್ರವೇ ಅಸಾಧ್ಯ ಎಂದು ವೈದ್ಯ ಪರಿಷತ್ತು ಆತಂಕ ವ್ಯಕ್ತಪಡಿಸಿದೆ. ಹೀಗಾಗಿ ಈಗಿನ ಎಲ್ಲಾ ಕ್ರಮಗಳು ಭವಿಷ್ಯ ನಿರ್ಧಾರ ಮಾಡುವುದೇ ಆಗಿದೆ.

ಸಂಶೋಧನೆಗಳ ಪ್ರಕಾರ ವೈರಸ್ ಹರಡುವಿಕೆಯ ಪ್ರಮಾಣ ಈಗ ಹೆಚ್ಚುತ್ತಿದೆ. ಆರಂಭದಲ್ಲಿ  ಒಬ್ಬ ಸೋಂಕಿತ ವ್ಯಕ್ತಿಯಿಂದ ಸರಿಸುಮಾರು 2 ರಿಂದ 5 ಮಂದಿಗೆ  ಹರಡುವ ಸಾಧ್ಯತೆಗಳಿವೆ. ಮುಂದಿನ ಹಂತದಲ್ಲಿ 2 ರಿಂದ 5 ಮಂದಿಗೆ ಹರಡುವ ಸಾಧ್ಯತೆ ಇದೆ. ಇದು ತೀರಾ ಅಪಾಯಕಾರಿ ಸನ್ನಿವೇಶ. ಈ ನಿಟ್ಟಿನಲ್ಲಿ ತುರ್ತು ಕ್ರಮ ಅಗತ್ಯವಾಗುತ್ತದೆ. ಹೀಗಾಗಿ ಕೊರೊನಾ ವೈರಸ್‌ ಸೋಂಕಿನ ಲಕ್ಷಣಗಳನ್ನು ಹೊಂದಿರುವವರಿಂದ ಅಂತರ ಕಾಯ್ದುಕೊಂಡರೆ ಹೊಸ ಪ್ರಕರಣಗಳು ಕಡಿಮೆಯಾಗಬಹುದು. ಈ ನಿಯಮ ಪಾಲಿಸಿದರೆ ಭಾರತ ಸುರಕ್ಷಿತವಾಗಬಲ್ಲುದು ಎಂದು ಸಂಶೋಧನೆ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

18 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

1 day ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago