ಕೊರೊನಾ ವೈರಸ್ ಹರಡುವುದು ತಡೆಗೆ ವಿವಿಧ ಪ್ರಯತ್ನ ಮಾಡಲಾಗುತ್ತಿದೆ. ಎರಡು ದಿನಗಳ ಹಿಂದೆ ಜನತಾ ಕರ್ಫ್ಯೂ ಆಚರಿಸಲಾಯಿತು. ಅದಾದ ಬಳಿಕ ಮಾ.31 ರವರೆಗೆ ಲಾಕ್ ಡೌನ್ ಎಂದೂ ಹೇಳಲಾಯಿತು. ಅದಾದ ಮರುದಿನವೇ ನೋಡಿದರೆ ಅಂಗಡಿಗಳಲ್ಲಿ, ಹಾಲು ಖರೀದಿಯಲ್ಲಿ, ಎಲ್ಲೆಂದರಲ್ಲಿ ಜನ ಮುಗಿಬಿದ್ದಿದ್ದಾರೆ. ಎಲ್ಲಾ ಜಾಗೃತಿಯ ಜೊತೆಗೆ ಪ್ರಮುಖವಾಗಿ ಈಗ ಆಗಬೇಕಾದ್ದು ಲಾಕ್ ಡೌನ್ ಜೊತೆಗೆ ಸಾಮಾಜಿಕ ಅಂತರ. ಆಗಾಗ ಸ್ವಚ್ಛತೆ.
ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನ ವರದಿ ಕೂಡಾ ಇದನ್ನೇ ಹೇಳಿದೆ, ಭಾರತದಲ್ಲಿ ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಸಾಮಾಜಿಕ ಅಂತರವೇ ಪ್ರಮುಖ ಪರಿಹಾರ. ಇದರ ಹೊರತಾಗಿ ಬೇರೆ ದಾರಿ ಇಲ್ಲ. ಇದು ತಪ್ಪಿದರೆ ಭಾರತದಂತಹ ದೇಶ ಅತ್ಯಂತ ಅಪಾಯಕಾರಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಈಗ ಕೊರೊನಾ ವೈರಸ್ ಹರಡುವುದು ತಡೆಯುವಲ್ಲಿ ಪ್ರತಿಯೊಬ್ಬನ ಜವಾಬ್ದಾರಿ ಇದೆ. ಸರಕಾರದಿಂದ , ಯಾವುದೇ ಅಧಿಕಾರಿಯಿಂದ, ಪೊಲೀಸರಿಂದ , ಸ್ವಯಂಸೇವಾ ಸಂಸ್ಥೆಗಳಿಂದ ಸಾದ್ಯವಿಲ್ಲ, ಪ್ರತೀ ವ್ಯಕ್ತಿ ಜಾಗೃತವಾದರೆ, ಜವಾಬ್ದಾರಿಯಿಂದ ಕೆಲಸ ಮಾಡಿದರೆ ಮಾತ್ರವೇ ವೈರಸ್ ಹರಡುವುದು ತಡೆಯಲು ಸಾಧ್ಯವಿದೆ. ಒಂದು ವೇಳೆ ದೇಶದ ಆರೋಗ್ಯ ಸೇವೆಯಲ್ಲಿನ ಇಂತಹ ತುರ್ತು ಪರಿಸ್ಥಿಯನ್ನು ಜನರಿಗೆ ನಿಭಾಯಿಸಲಾಗದೇ ಹೋದರೆ ,ವಿಷಮ ಪರಿಸ್ಥಿತಿಗೆ ತಲುಪುವ ಅಪಾಯವಿದೆ ಎಂದೂ ಅಧ್ಯಯನ ವರದಿ ಎಚ್ಚರಿಸಿದೆ.
ಸೋಂಕಿತ ವ್ಯಕ್ತಿಯನ್ನು ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡುವುದು ಒಂದು ದಾರಿಯಾದರೆ ಉಳಿದವರು ಅಂತರ ಕಾಯ್ದುಕೊಳ್ಳುವುದು ಇನ್ನೊಂದು ದಾರಿ. ಚೀನಾ, ಇಟಲಿಯ ಮಾದರಿಯಲ್ಲಿ ಈ ವೈರಸ್ ಭಾರತದಲ್ಲೂ ಮುಂದೆ ಹರಡಿದರೆ ನಿಯಂತ್ರವೇ ಅಸಾಧ್ಯ ಎಂದು ವೈದ್ಯ ಪರಿಷತ್ತು ಆತಂಕ ವ್ಯಕ್ತಪಡಿಸಿದೆ. ಹೀಗಾಗಿ ಈಗಿನ ಎಲ್ಲಾ ಕ್ರಮಗಳು ಭವಿಷ್ಯ ನಿರ್ಧಾರ ಮಾಡುವುದೇ ಆಗಿದೆ.
ಸಂಶೋಧನೆಗಳ ಪ್ರಕಾರ ವೈರಸ್ ಹರಡುವಿಕೆಯ ಪ್ರಮಾಣ ಈಗ ಹೆಚ್ಚುತ್ತಿದೆ. ಆರಂಭದಲ್ಲಿ ಒಬ್ಬ ಸೋಂಕಿತ ವ್ಯಕ್ತಿಯಿಂದ ಸರಿಸುಮಾರು 2 ರಿಂದ 5 ಮಂದಿಗೆ ಹರಡುವ ಸಾಧ್ಯತೆಗಳಿವೆ. ಮುಂದಿನ ಹಂತದಲ್ಲಿ 2 ರಿಂದ 5 ಮಂದಿಗೆ ಹರಡುವ ಸಾಧ್ಯತೆ ಇದೆ. ಇದು ತೀರಾ ಅಪಾಯಕಾರಿ ಸನ್ನಿವೇಶ. ಈ ನಿಟ್ಟಿನಲ್ಲಿ ತುರ್ತು ಕ್ರಮ ಅಗತ್ಯವಾಗುತ್ತದೆ. ಹೀಗಾಗಿ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳನ್ನು ಹೊಂದಿರುವವರಿಂದ ಅಂತರ ಕಾಯ್ದುಕೊಂಡರೆ ಹೊಸ ಪ್ರಕರಣಗಳು ಕಡಿಮೆಯಾಗಬಹುದು. ಈ ನಿಯಮ ಪಾಲಿಸಿದರೆ ಭಾರತ ಸುರಕ್ಷಿತವಾಗಬಲ್ಲುದು ಎಂದು ಸಂಶೋಧನೆ ಹೇಳಿದೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…