Advertisement
ಸುದ್ದಿಗಳು

ಕೊರೊನಾ ವೈರಸ್ ತಡೆ | ಸಹಕಾರಿ ಸಂಘಗಳ ಪಾತ್ರ | ಜನ ಹಿತಕ್ಕಾಗಿ ಸುಳ್ಯ ತಾಲೂಕು ಸಹಕಾರಿ ಸಂಘಗಳ ಮಾದರಿ ಹೆಜ್ಜೆ |

Share

ಸುಳ್ಯ: ಕೊರೊನಾ ವೈರಸ್ ಹರಡುವುದು  ತಡೆಗೆ ತೆಗೆದುಕೊಂಡು ಪ್ರಮುಖ ಹೆಜ್ಜೆ ಲಾಕ್ ಡೌನ್. ಇದರ ಮುಖ್ಯ ಉದ್ದೇಶ ಜನರಿಂದ ಜನರಿಗೆ ಹರಡುವುದು  ತಡೆಯಲು. ಇದಕ್ಕಾಗಿ ಮುಖ್ಯವಾಗಿ ಬೇಕಿರುವುದು  ಸಾಮಾಜಿಕ ಅಂತರ. ಈ ಹಂತದಲ್ಲಿ  ಸುಳ್ಯ ತಾಲೂಕಿನ ಸಹಕಾರಿ ಸಂಘಗಳಲ್ಲಿ  ಕೆಲವು ಸಂಘಗಳು ಪ್ರಮುಖ ಪಾತ್ರ ವಹಿಸಿದೆ. ಪ್ರಮುಖ ಹೆಜ್ಜೆ ಇರಿಸಿದೆ. ಅದರಲ್ಲಿ ಕಳಂಜ ಸಹಕಾರಿ ಸಂಘದಿಂದ ಮನೆಮನೆಗೆ ದಿನಸಿ ಸಾಮಾಗ್ರಿ ತಲಪಿಸುವ ವ್ಯವಸ್ಥೆಗೆ ಮುಂದಾಗಿದೆ. ಇತರ ಕೆಲವು ಸಹಕಾರಿ ಸಂಘಗಳೂ ಪ್ರಮುಖ ನಿರ್ಧಾರ ಕೈಗೊಂಡಿದೆ.

ಕಳಂಜ ಸಹಕಾರಿ ಸಂಘವು ತನ್ನದೇ ಆದ ದಿನಸಿ ವಿಭಾಗವನ್ನು ಹೊಂದಿದೆ. ಇದೀಗ ಗ್ರಾಮದ ಜನರ ಸೇವೆಗೆ ಮುಂದಾಗಿದೆ. ಸಂಘದ ದಿನಸಿ ವಿಭಾಗದಲ್ಲಿ ಲಭ್ಯವಿರುವ ಸಾಮಾಗ್ರಿಗಳನ್ನು ನಿರ್ದೇಶಕರ ಹಾಗೂ ಸಾಮಾಜಿಕ ಕಾರ್ಯಕರ್ತರ ಮೂಲಕ ಗ್ರಾಮದ ಜನರ  ಮನೆಗೆ ತಲುಪಿಸುವ ವ್ಯವಸ್ಥೆ ಮಾಡಿದೆ. ಈ ವ್ಯವಸ್ಥೆ ತಕ್ಷಣವೇ ಜಾರಿಗೆ ಬರಲಿದೆ ಎಂದು ಸಹಕಾರಿ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

ಇದಕ್ಕೆ ಸಹಕಾರಿ ಸಂಘವು ವ್ಯಾಟ್ಸಪ್ ಗುಂಪು ರಚನೆ ಮಾಡಿ ಆ ಗುಂಪಿನ ಮೂಲಕ ಗ್ರಾಮದ ಜನರಿಗೆ ಮಾಹಿತಿ ನೀಡಲಾಗುತ್ತದೆ. ಜನರು ತಮಗೆ ತುರ್ತಾಗಿ ಅಗತ್ಯ ಇರುವ ಸಾಮಾಗ್ರಿಗಳ ಪಟ್ಟಿಯನ್ನು ಕರೆ ಮಾಡಿ ಅಥವಾ ವ್ಯಾಟ್ಸಪ್  ಮೂಲಕ ಪಟ್ಟಿಯನ್ನು ಕಳುಹಿಸಿ ಸಾಮಾಗ್ರಿ ಪಡೆಯಬಹುದಾಗಿದೆ.

ಅರಂತೋಡು-ತೊಡಿಕಾನ ಸಹಕಾರಿ ಸಂಘದಲ್ಲಿ ಇನ್ನೊಂದು ಹೆಜ್ಜೆ:

ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭ ಕೃಷಿಕ ಸಂಕಷ್ಟಕ್ಕೆ ಒಳಗಾಗಬಾರದು ಎಂದು ಅರಂತೋಡು-ತೊಡಿಕಾನ ಸಹಕಾರಿ ಸಂಘ ಪ್ರಮುಖ ಹೆಜ್ಜೆ ಇರಿಸಿದೆ.

ಸಂಘದ ಸದಸ್ಯ ವೈಯುಕ್ತಿಕ, ವಾಹನ ಖರೀದಿ, ಆಭರಣ ಈಡಿನ ಸಾಲ, ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿಯೇತರ ಸಾಲಗಳ ಮೇಲಿನ ಮಾ. 25ರಿಂದ ಏ. 30ರ ವರೆಗಿನ ಬಡ್ಡಿಯನ್ನು  ಮನ್ನಾ ಮಾಡಲು ತೀರ್ಮಾನಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಸಹಕಾರಿ ಸಂಘದ ಸೇವೆಗಳು ಸದಸ್ಯರ ಉಪಯೋಗಕ್ಕಾಗಿ ಲಭ್ಯವಾಗಲಿದೆ.ಇಷ್ಟೇ ಅಲ್ಲ , ಸಂಘದ ವ್ಯಾಪ್ತಿಯಲ್ಲಿ ಯಾರಿಗಾದರೂ ಆಹಾರದ ಮತ್ತು ಆರೋಗ್ಯದ ಸಮಸ್ಯೆ ಕಂಡು ಬಂದರೆ ಆಯಾಯ ಭಾಗದ ನಿರ್ದೇಶಕರನ್ನು ಸಂಪರ್ಕಿಸಿ, ಅರ್ಹ ಫಲಾನುಭವಿಗಳಿಗೆ ಸಹಕಾರಿ ಸಂಘದ ವತಿಯಿಂದ ಉಚಿತ ಪಡಿತರ ಕಿಟ್ ಅನ್ನು ವಿತರಿಸಲು ವ್ಯವಸ್ಥೆ ಮಾಡಿದೆ.ಇದೊಂದು ಸಹಕಾರಿ ಸಂಘ ತೆಗೆದುಕೊಂಡಿರುವ ಮಹತ್ವದ ಹೆಜ್ಜೆ ಹಾಗೂ ಮಾದರಿ ಸಹಕಾರಿ ಸಂಘವಾಗಿ ಗುರುತಿಸಿದೆ.

ಗುತ್ತಿಗಾರು ಸಹಕಾರಿ ಸಂಘ:

ಗುತ್ತಿಗಾರು ಸಹಕಾರಿ ಸಂಘವು ಕೂಡಾ ಸಂಘದ ಸದಸ್ಯರಿಗೆ ಆರ್ಥಿಕ ವ್ಯವಹಾರ, ರೇಶನ್ ಗೆ ವ್ಯವಸ್ಥೆ ಮಾಡಿದೆ. ಸಂಘದ ಸದಸ್ಯರಿಗೆ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ವ್ಯವಹಾರಕ್ಕೆ ವ್ಯವಸ್ಥೆ ಮಾಡಿದೆ. ಅಲ್ಲದೆ ಸಂಘದ ಪೆಟ್ರೋಲ್ ಪಂಪ್ ಸೇವೆ ಸಂಜೆಯವರೆಗೆ ವ್ಯವಸ್ಥೆ ಮಾಡಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago