ರಾಷ್ಟ್ರೀಯ

ಕೊರೊನಾ ವೈರಸ್ ತವರು ವುಹಾನ್ ಈಗ ಕಡಿಮೆ ಅಪಾಯದ ಪ್ರದೇಶ ಎಂದು ಚೀನಾ ಘೋಷಣೆ | ಜ. 23 ರಿಂದ  ಲಾಕ್ಡೌನ್ ನಲ್ಲಿದ್ದ ವುಹಾನ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೀಜಿಂಗ್: ಇಡೀ ಜಗತ್ತಿಗೆ ಕೊರೊನಾ ವೈರಸ್ ಹರಡಿದ ಚೀನಾದಲ್ಲಿ ಮೊದಲು ವೈರಸ್ ಕಂಡುಬಂದ ವುಹಾನ್ ಈಗ ಕಡಿಮೆ ಅಪಾಯದ ಪ್ರದೇಶ ಎಂದು ಚೀನಾ ಘೋಷಣೆ ಮಾಡಿದೆ. ಕಳೆದ ಕೆಲವು ದಿನಗಳ ನಿಗಾದ ಬಳಿಕ ಚೀನಾ ಈ ಘೋಷಣೆ ಮಾಡಿದೆ.

Advertisement

ಚೀನಾದ ಆರೋಗ್ಯ ಅಧಿಕಾರಿಗಳು ಭಾನುವಾರ ಈ ಮಾಹಿತಿ ತಿಳಿಸಿದ್ದು ಚೀನಾದ ಸ್ಟೇಟ್ ಕೌನ್ಸಿಲ್ ಹೊರಡಿಸಿದ ಮಾರ್ಗಸೂಚಿಯಲ್ಲಿ ವ್ಯಾಖ್ಯಾನಿಸಲಾದ ಅಪಾಯದ ಮಾನದಂಡಗಳ ಪ್ರಕಾರ, ಕಳೆದ 14 ದಿನಗಳಲ್ಲಿ ಹೊಸದಾಗಿ ಕೊರೊನಾ ವೈರಸ್ ದೃಢಪಟ್ಟ ಪ್ರಕರಣಗಳಿಲ್ಲದ ನಗರಗಳು ಮತ್ತು ಜಿಲ್ಲೆಗಳನ್ನು ಈಗ ಕಡಿಮೆ-ಅಪಾಯದ ಪ್ರದೇಶಗಳಾಗಿ ವರ್ಗೀಕರಿಸಲಾಗಿದೆ. ಇದರಲ್ಲಿ  ಕೊರೊನಾ ವೈರಸ್ ತವರು ವುಹಾನ್ ಕೂಡಾ ಸೇರಿದೆ.

ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು (ಎನ್‌ಎಚ್‌ಸಿ) ಭಾನುವಾರ ದೇಶದಲ್ಲಿ 16 ಹೊಸ ಕೊರೊನಾ ಪ್ರಕರಣಗಳಿದೆ ಎಂದು  ಪ್ರಕಟಿಸಿದೆ. ಶನಿವಾರ ಯಾವುದೇ  ಮೃತಪಟ್ಟ ವರದಿಯಾಗಿಲ್ಲವಾದ್ದರಿಂದ ಸಾವಿನ ಸಂಖ್ಯೆ 4,632 ರಷ್ಟಿದೆ ಎಂದು ಅದು ಹೇಳಿದೆ. ಚೀನಾದಲ್ಲಿ ಒಟ್ಟಾರೆ ದೃಢಪಟ್ಟ ಕೊರೊನಾ ವೈರಸ್ ಪ್ರಕರಣಗಳು ಶನಿವಾರದ ವೇಳೆಗೆ 82,735 ಕ್ಕೆ ತಲುಪಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿರುವ 1,041 ರೋಗಿಗಳು, ಚೇತರಿಕೆಯ ನಂತರ ಬಿಡುಗಡೆಯಾದ 77,062 ಜನರು ಮತ್ತು ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ 4,632 ಮಂದಿ ಎಂದು ವರದಿ ಹೇಳಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಕೊರೊನಾ ವೈರಸ್ ಚೀನಾದ ವುಹಾನ್ ನಲ್ಲಿ  ಕಂಡುಬಂದಿತ್ತು. ನಂತರ ಅದು ಹರಡಿತ್ತು. ಏ.16 ರ ಹೊತ್ತಿಗೆ, ವುಹಾನ್‌ನಲ್ಲಿ 50,333 ಮಂದಿಗೆ ಕೊರೊನಾ ವೈರಸ್ ದೃಢಪಟ್ಟಿತ್ತು. 3,869  ಮಂದಿ ಸಾವನ್ನಪ್ಪಿದ್ದರು. ಆದರೆ ಇಡೀ ಚೀನಾದಲ್ಲಿ ಒಟ್ಟಾರೆ ಮೃತಪಟ್ಟವರು  4,632 ಜನ.

Advertisement

ಇದೀಗ ಅಧಿಕೃತ ಅಧಿಸೂಚನೆಗಳ ಪ್ರಕಾರ ವುಹಾನ್ ನಗರದಲ್ಲಿ ವೈರಸ್ ಹರಡಿದ ಪ್ರಕರಣಗಳು ಮತ್ತು ಸಾವುಗಳು ಕಡಿಮೆಯಾದ ಕಾರಣ ಕಡಿಮೆ ಅಪಾಯದ ಪ್ರದೇಶ ಎಂದು ಘೋಷಿಸಲಾಗಿದೆ. ಆದರೆ ವುಹಾನ್ ನಿಂದ ಹೊರಹೋಗುವ ಹಾಗೂ ಒಳಬರುವ ಜನರ ಮೇಲೆ ನಿಗಾ ಇಡಲಾಗುತ್ತಿದೆ ಎಂದು ಆರೋಗ್ಯ ಸಂಸ್ಥೆ ಹೇಳಿದೆ.

Advertisement

ಅಧಿಕ ಜನಸಂಖ್ಯೆ ಹೊಂದಿರುವ ಚೀನಾದ  ಹುಬೈ  ಹಾಗೂ ವುಹಾನ್ ಜ. 23 ರಿಂದ  ಲಾಕ್ಡೌನ್ ನಲ್ಲಿತ್ತು. ಎ.8 ರಂದು ಸಡಿಲಿಕೆ ಮಾಡಿತ್ತು. ಇದೀಗ ಕಡಿಮೆ ಅಪಾಯದ ಪ್ರದೇಶ ಎಂದು ಗುರುತಿಸಲಾಗಿದೆ.

( ಪಿಟಿಐ ವರದಿ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

2 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

9 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

14 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

15 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago