Advertisement
ರಾಷ್ಟ್ರೀಯ

ಕೊರೊನಾ ವೈರಸ್ ತವರು ವುಹಾನ್ ಈಗ ಕಡಿಮೆ ಅಪಾಯದ ಪ್ರದೇಶ ಎಂದು ಚೀನಾ ಘೋಷಣೆ | ಜ. 23 ರಿಂದ  ಲಾಕ್ಡೌನ್ ನಲ್ಲಿದ್ದ ವುಹಾನ್ |

Share

ಬೀಜಿಂಗ್: ಇಡೀ ಜಗತ್ತಿಗೆ ಕೊರೊನಾ ವೈರಸ್ ಹರಡಿದ ಚೀನಾದಲ್ಲಿ ಮೊದಲು ವೈರಸ್ ಕಂಡುಬಂದ ವುಹಾನ್ ಈಗ ಕಡಿಮೆ ಅಪಾಯದ ಪ್ರದೇಶ ಎಂದು ಚೀನಾ ಘೋಷಣೆ ಮಾಡಿದೆ. ಕಳೆದ ಕೆಲವು ದಿನಗಳ ನಿಗಾದ ಬಳಿಕ ಚೀನಾ ಈ ಘೋಷಣೆ ಮಾಡಿದೆ.

Advertisement
Advertisement

ಚೀನಾದ ಆರೋಗ್ಯ ಅಧಿಕಾರಿಗಳು ಭಾನುವಾರ ಈ ಮಾಹಿತಿ ತಿಳಿಸಿದ್ದು ಚೀನಾದ ಸ್ಟೇಟ್ ಕೌನ್ಸಿಲ್ ಹೊರಡಿಸಿದ ಮಾರ್ಗಸೂಚಿಯಲ್ಲಿ ವ್ಯಾಖ್ಯಾನಿಸಲಾದ ಅಪಾಯದ ಮಾನದಂಡಗಳ ಪ್ರಕಾರ, ಕಳೆದ 14 ದಿನಗಳಲ್ಲಿ ಹೊಸದಾಗಿ ಕೊರೊನಾ ವೈರಸ್ ದೃಢಪಟ್ಟ ಪ್ರಕರಣಗಳಿಲ್ಲದ ನಗರಗಳು ಮತ್ತು ಜಿಲ್ಲೆಗಳನ್ನು ಈಗ ಕಡಿಮೆ-ಅಪಾಯದ ಪ್ರದೇಶಗಳಾಗಿ ವರ್ಗೀಕರಿಸಲಾಗಿದೆ. ಇದರಲ್ಲಿ  ಕೊರೊನಾ ವೈರಸ್ ತವರು ವುಹಾನ್ ಕೂಡಾ ಸೇರಿದೆ.

ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು (ಎನ್‌ಎಚ್‌ಸಿ) ಭಾನುವಾರ ದೇಶದಲ್ಲಿ 16 ಹೊಸ ಕೊರೊನಾ ಪ್ರಕರಣಗಳಿದೆ ಎಂದು  ಪ್ರಕಟಿಸಿದೆ. ಶನಿವಾರ ಯಾವುದೇ  ಮೃತಪಟ್ಟ ವರದಿಯಾಗಿಲ್ಲವಾದ್ದರಿಂದ ಸಾವಿನ ಸಂಖ್ಯೆ 4,632 ರಷ್ಟಿದೆ ಎಂದು ಅದು ಹೇಳಿದೆ. ಚೀನಾದಲ್ಲಿ ಒಟ್ಟಾರೆ ದೃಢಪಟ್ಟ ಕೊರೊನಾ ವೈರಸ್ ಪ್ರಕರಣಗಳು ಶನಿವಾರದ ವೇಳೆಗೆ 82,735 ಕ್ಕೆ ತಲುಪಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿರುವ 1,041 ರೋಗಿಗಳು, ಚೇತರಿಕೆಯ ನಂತರ ಬಿಡುಗಡೆಯಾದ 77,062 ಜನರು ಮತ್ತು ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ 4,632 ಮಂದಿ ಎಂದು ವರದಿ ಹೇಳಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಕೊರೊನಾ ವೈರಸ್ ಚೀನಾದ ವುಹಾನ್ ನಲ್ಲಿ  ಕಂಡುಬಂದಿತ್ತು. ನಂತರ ಅದು ಹರಡಿತ್ತು. ಏ.16 ರ ಹೊತ್ತಿಗೆ, ವುಹಾನ್‌ನಲ್ಲಿ 50,333 ಮಂದಿಗೆ ಕೊರೊನಾ ವೈರಸ್ ದೃಢಪಟ್ಟಿತ್ತು. 3,869  ಮಂದಿ ಸಾವನ್ನಪ್ಪಿದ್ದರು. ಆದರೆ ಇಡೀ ಚೀನಾದಲ್ಲಿ ಒಟ್ಟಾರೆ ಮೃತಪಟ್ಟವರು  4,632 ಜನ.

ಇದೀಗ ಅಧಿಕೃತ ಅಧಿಸೂಚನೆಗಳ ಪ್ರಕಾರ ವುಹಾನ್ ನಗರದಲ್ಲಿ ವೈರಸ್ ಹರಡಿದ ಪ್ರಕರಣಗಳು ಮತ್ತು ಸಾವುಗಳು ಕಡಿಮೆಯಾದ ಕಾರಣ ಕಡಿಮೆ ಅಪಾಯದ ಪ್ರದೇಶ ಎಂದು ಘೋಷಿಸಲಾಗಿದೆ. ಆದರೆ ವುಹಾನ್ ನಿಂದ ಹೊರಹೋಗುವ ಹಾಗೂ ಒಳಬರುವ ಜನರ ಮೇಲೆ ನಿಗಾ ಇಡಲಾಗುತ್ತಿದೆ ಎಂದು ಆರೋಗ್ಯ ಸಂಸ್ಥೆ ಹೇಳಿದೆ.

ಅಧಿಕ ಜನಸಂಖ್ಯೆ ಹೊಂದಿರುವ ಚೀನಾದ  ಹುಬೈ  ಹಾಗೂ ವುಹಾನ್ ಜ. 23 ರಿಂದ  ಲಾಕ್ಡೌನ್ ನಲ್ಲಿತ್ತು. ಎ.8 ರಂದು ಸಡಿಲಿಕೆ ಮಾಡಿತ್ತು. ಇದೀಗ ಕಡಿಮೆ ಅಪಾಯದ ಪ್ರದೇಶ ಎಂದು ಗುರುತಿಸಲಾಗಿದೆ.

( ಪಿಟಿಐ ವರದಿ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

14 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago