Advertisement
ರಾಷ್ಟ್ರೀಯ

ಕೊರೊನಾ ವೈರಸ್ ತವರು ವುಹಾನ್ ಈಗ ಕಡಿಮೆ ಅಪಾಯದ ಪ್ರದೇಶ ಎಂದು ಚೀನಾ ಘೋಷಣೆ | ಜ. 23 ರಿಂದ  ಲಾಕ್ಡೌನ್ ನಲ್ಲಿದ್ದ ವುಹಾನ್ |

Share

ಬೀಜಿಂಗ್: ಇಡೀ ಜಗತ್ತಿಗೆ ಕೊರೊನಾ ವೈರಸ್ ಹರಡಿದ ಚೀನಾದಲ್ಲಿ ಮೊದಲು ವೈರಸ್ ಕಂಡುಬಂದ ವುಹಾನ್ ಈಗ ಕಡಿಮೆ ಅಪಾಯದ ಪ್ರದೇಶ ಎಂದು ಚೀನಾ ಘೋಷಣೆ ಮಾಡಿದೆ. ಕಳೆದ ಕೆಲವು ದಿನಗಳ ನಿಗಾದ ಬಳಿಕ ಚೀನಾ ಈ ಘೋಷಣೆ ಮಾಡಿದೆ.

Advertisement
Advertisement

ಚೀನಾದ ಆರೋಗ್ಯ ಅಧಿಕಾರಿಗಳು ಭಾನುವಾರ ಈ ಮಾಹಿತಿ ತಿಳಿಸಿದ್ದು ಚೀನಾದ ಸ್ಟೇಟ್ ಕೌನ್ಸಿಲ್ ಹೊರಡಿಸಿದ ಮಾರ್ಗಸೂಚಿಯಲ್ಲಿ ವ್ಯಾಖ್ಯಾನಿಸಲಾದ ಅಪಾಯದ ಮಾನದಂಡಗಳ ಪ್ರಕಾರ, ಕಳೆದ 14 ದಿನಗಳಲ್ಲಿ ಹೊಸದಾಗಿ ಕೊರೊನಾ ವೈರಸ್ ದೃಢಪಟ್ಟ ಪ್ರಕರಣಗಳಿಲ್ಲದ ನಗರಗಳು ಮತ್ತು ಜಿಲ್ಲೆಗಳನ್ನು ಈಗ ಕಡಿಮೆ-ಅಪಾಯದ ಪ್ರದೇಶಗಳಾಗಿ ವರ್ಗೀಕರಿಸಲಾಗಿದೆ. ಇದರಲ್ಲಿ  ಕೊರೊನಾ ವೈರಸ್ ತವರು ವುಹಾನ್ ಕೂಡಾ ಸೇರಿದೆ.

Advertisement

ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು (ಎನ್‌ಎಚ್‌ಸಿ) ಭಾನುವಾರ ದೇಶದಲ್ಲಿ 16 ಹೊಸ ಕೊರೊನಾ ಪ್ರಕರಣಗಳಿದೆ ಎಂದು  ಪ್ರಕಟಿಸಿದೆ. ಶನಿವಾರ ಯಾವುದೇ  ಮೃತಪಟ್ಟ ವರದಿಯಾಗಿಲ್ಲವಾದ್ದರಿಂದ ಸಾವಿನ ಸಂಖ್ಯೆ 4,632 ರಷ್ಟಿದೆ ಎಂದು ಅದು ಹೇಳಿದೆ. ಚೀನಾದಲ್ಲಿ ಒಟ್ಟಾರೆ ದೃಢಪಟ್ಟ ಕೊರೊನಾ ವೈರಸ್ ಪ್ರಕರಣಗಳು ಶನಿವಾರದ ವೇಳೆಗೆ 82,735 ಕ್ಕೆ ತಲುಪಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿರುವ 1,041 ರೋಗಿಗಳು, ಚೇತರಿಕೆಯ ನಂತರ ಬಿಡುಗಡೆಯಾದ 77,062 ಜನರು ಮತ್ತು ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ 4,632 ಮಂದಿ ಎಂದು ವರದಿ ಹೇಳಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಕೊರೊನಾ ವೈರಸ್ ಚೀನಾದ ವುಹಾನ್ ನಲ್ಲಿ  ಕಂಡುಬಂದಿತ್ತು. ನಂತರ ಅದು ಹರಡಿತ್ತು. ಏ.16 ರ ಹೊತ್ತಿಗೆ, ವುಹಾನ್‌ನಲ್ಲಿ 50,333 ಮಂದಿಗೆ ಕೊರೊನಾ ವೈರಸ್ ದೃಢಪಟ್ಟಿತ್ತು. 3,869  ಮಂದಿ ಸಾವನ್ನಪ್ಪಿದ್ದರು. ಆದರೆ ಇಡೀ ಚೀನಾದಲ್ಲಿ ಒಟ್ಟಾರೆ ಮೃತಪಟ್ಟವರು  4,632 ಜನ.

Advertisement

ಇದೀಗ ಅಧಿಕೃತ ಅಧಿಸೂಚನೆಗಳ ಪ್ರಕಾರ ವುಹಾನ್ ನಗರದಲ್ಲಿ ವೈರಸ್ ಹರಡಿದ ಪ್ರಕರಣಗಳು ಮತ್ತು ಸಾವುಗಳು ಕಡಿಮೆಯಾದ ಕಾರಣ ಕಡಿಮೆ ಅಪಾಯದ ಪ್ರದೇಶ ಎಂದು ಘೋಷಿಸಲಾಗಿದೆ. ಆದರೆ ವುಹಾನ್ ನಿಂದ ಹೊರಹೋಗುವ ಹಾಗೂ ಒಳಬರುವ ಜನರ ಮೇಲೆ ನಿಗಾ ಇಡಲಾಗುತ್ತಿದೆ ಎಂದು ಆರೋಗ್ಯ ಸಂಸ್ಥೆ ಹೇಳಿದೆ.

ಅಧಿಕ ಜನಸಂಖ್ಯೆ ಹೊಂದಿರುವ ಚೀನಾದ  ಹುಬೈ  ಹಾಗೂ ವುಹಾನ್ ಜ. 23 ರಿಂದ  ಲಾಕ್ಡೌನ್ ನಲ್ಲಿತ್ತು. ಎ.8 ರಂದು ಸಡಿಲಿಕೆ ಮಾಡಿತ್ತು. ಇದೀಗ ಕಡಿಮೆ ಅಪಾಯದ ಪ್ರದೇಶ ಎಂದು ಗುರುತಿಸಲಾಗಿದೆ.

Advertisement

( ಪಿಟಿಐ ವರದಿ )

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

4 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

4 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

4 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

5 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

5 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

5 hours ago