Advertisement
ರಾಷ್ಟ್ರೀಯ

ಕೊರೊನಾ ವೈರಸ್ ತವರು ವುಹಾನ್ ಈಗ ಕಡಿಮೆ ಅಪಾಯದ ಪ್ರದೇಶ ಎಂದು ಚೀನಾ ಘೋಷಣೆ | ಜ. 23 ರಿಂದ  ಲಾಕ್ಡೌನ್ ನಲ್ಲಿದ್ದ ವುಹಾನ್ |

Share

ಬೀಜಿಂಗ್: ಇಡೀ ಜಗತ್ತಿಗೆ ಕೊರೊನಾ ವೈರಸ್ ಹರಡಿದ ಚೀನಾದಲ್ಲಿ ಮೊದಲು ವೈರಸ್ ಕಂಡುಬಂದ ವುಹಾನ್ ಈಗ ಕಡಿಮೆ ಅಪಾಯದ ಪ್ರದೇಶ ಎಂದು ಚೀನಾ ಘೋಷಣೆ ಮಾಡಿದೆ. ಕಳೆದ ಕೆಲವು ದಿನಗಳ ನಿಗಾದ ಬಳಿಕ ಚೀನಾ ಈ ಘೋಷಣೆ ಮಾಡಿದೆ.

ಚೀನಾದ ಆರೋಗ್ಯ ಅಧಿಕಾರಿಗಳು ಭಾನುವಾರ ಈ ಮಾಹಿತಿ ತಿಳಿಸಿದ್ದು ಚೀನಾದ ಸ್ಟೇಟ್ ಕೌನ್ಸಿಲ್ ಹೊರಡಿಸಿದ ಮಾರ್ಗಸೂಚಿಯಲ್ಲಿ ವ್ಯಾಖ್ಯಾನಿಸಲಾದ ಅಪಾಯದ ಮಾನದಂಡಗಳ ಪ್ರಕಾರ, ಕಳೆದ 14 ದಿನಗಳಲ್ಲಿ ಹೊಸದಾಗಿ ಕೊರೊನಾ ವೈರಸ್ ದೃಢಪಟ್ಟ ಪ್ರಕರಣಗಳಿಲ್ಲದ ನಗರಗಳು ಮತ್ತು ಜಿಲ್ಲೆಗಳನ್ನು ಈಗ ಕಡಿಮೆ-ಅಪಾಯದ ಪ್ರದೇಶಗಳಾಗಿ ವರ್ಗೀಕರಿಸಲಾಗಿದೆ. ಇದರಲ್ಲಿ  ಕೊರೊನಾ ವೈರಸ್ ತವರು ವುಹಾನ್ ಕೂಡಾ ಸೇರಿದೆ.

ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು (ಎನ್‌ಎಚ್‌ಸಿ) ಭಾನುವಾರ ದೇಶದಲ್ಲಿ 16 ಹೊಸ ಕೊರೊನಾ ಪ್ರಕರಣಗಳಿದೆ ಎಂದು  ಪ್ರಕಟಿಸಿದೆ. ಶನಿವಾರ ಯಾವುದೇ  ಮೃತಪಟ್ಟ ವರದಿಯಾಗಿಲ್ಲವಾದ್ದರಿಂದ ಸಾವಿನ ಸಂಖ್ಯೆ 4,632 ರಷ್ಟಿದೆ ಎಂದು ಅದು ಹೇಳಿದೆ. ಚೀನಾದಲ್ಲಿ ಒಟ್ಟಾರೆ ದೃಢಪಟ್ಟ ಕೊರೊನಾ ವೈರಸ್ ಪ್ರಕರಣಗಳು ಶನಿವಾರದ ವೇಳೆಗೆ 82,735 ಕ್ಕೆ ತಲುಪಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿರುವ 1,041 ರೋಗಿಗಳು, ಚೇತರಿಕೆಯ ನಂತರ ಬಿಡುಗಡೆಯಾದ 77,062 ಜನರು ಮತ್ತು ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ 4,632 ಮಂದಿ ಎಂದು ವರದಿ ಹೇಳಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಕೊರೊನಾ ವೈರಸ್ ಚೀನಾದ ವುಹಾನ್ ನಲ್ಲಿ  ಕಂಡುಬಂದಿತ್ತು. ನಂತರ ಅದು ಹರಡಿತ್ತು. ಏ.16 ರ ಹೊತ್ತಿಗೆ, ವುಹಾನ್‌ನಲ್ಲಿ 50,333 ಮಂದಿಗೆ ಕೊರೊನಾ ವೈರಸ್ ದೃಢಪಟ್ಟಿತ್ತು. 3,869  ಮಂದಿ ಸಾವನ್ನಪ್ಪಿದ್ದರು. ಆದರೆ ಇಡೀ ಚೀನಾದಲ್ಲಿ ಒಟ್ಟಾರೆ ಮೃತಪಟ್ಟವರು  4,632 ಜನ.

ಇದೀಗ ಅಧಿಕೃತ ಅಧಿಸೂಚನೆಗಳ ಪ್ರಕಾರ ವುಹಾನ್ ನಗರದಲ್ಲಿ ವೈರಸ್ ಹರಡಿದ ಪ್ರಕರಣಗಳು ಮತ್ತು ಸಾವುಗಳು ಕಡಿಮೆಯಾದ ಕಾರಣ ಕಡಿಮೆ ಅಪಾಯದ ಪ್ರದೇಶ ಎಂದು ಘೋಷಿಸಲಾಗಿದೆ. ಆದರೆ ವುಹಾನ್ ನಿಂದ ಹೊರಹೋಗುವ ಹಾಗೂ ಒಳಬರುವ ಜನರ ಮೇಲೆ ನಿಗಾ ಇಡಲಾಗುತ್ತಿದೆ ಎಂದು ಆರೋಗ್ಯ ಸಂಸ್ಥೆ ಹೇಳಿದೆ.

ಅಧಿಕ ಜನಸಂಖ್ಯೆ ಹೊಂದಿರುವ ಚೀನಾದ  ಹುಬೈ  ಹಾಗೂ ವುಹಾನ್ ಜ. 23 ರಿಂದ  ಲಾಕ್ಡೌನ್ ನಲ್ಲಿತ್ತು. ಎ.8 ರಂದು ಸಡಿಲಿಕೆ ಮಾಡಿತ್ತು. ಇದೀಗ ಕಡಿಮೆ ಅಪಾಯದ ಪ್ರದೇಶ ಎಂದು ಗುರುತಿಸಲಾಗಿದೆ.

( ಪಿಟಿಐ ವರದಿ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

6 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

6 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

19 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

20 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

20 hours ago