ಮಂಗಳೂರು: ಕೊರೊನಾ ವೈರಸ್ ಸೋಂಕಿತರ ಪ್ರಕರಣ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ ಎಲ್ಲಾ ಪರೀಕ್ಷೆಗಳೂ ನೆಗೆಟಿವ್ ಬಂದಿದೆ. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಒಂದೇ ದಿನ 17 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 14 ಸ್ಯಾಂಪಲ್ ಗಳ ಪರಿಕ್ಷಾ ವರದಿ ಲಭ್ಯವಾಗಿದ್ದು, ಇದರಲ್ಲಿ 9 ನೆಗೆಟಿವ್ ವರದಿ ಲಭಿಸಿದೆ.ಉಳಿದ ಐದು ಮಂದಿಯ ವರದಿ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯಲ್ಲಿ ಸೋಮವಾರದಂದು ಎಲ್ಲವೂ ನೆಗೆಟಿವ್ ಪ್ರಕರಣಗಳೇ ದಾಖಲಾಗಿದೆ.
ಆದರೆ ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚುತ್ತಿದೆ. ಸೋಮವಾರ ಮತ್ತೆ 17 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ 106 ಕ್ಕೆ ಏರಿದೆ. ಒಟ್ಟು ಕೇರಳದಲ್ಲಿ ಕೇರಳದಲ್ಲಿ 213 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ 106 ಮಂದಿ ಕಾಸರಗೋಡು ಜಿಲ್ಲೆಯವರು ಎಂಬುದು ದಕ ಜಿಲ್ಲೆಯ ಮಂದಿಯೂ ಆತಂಕದ ಸಂಗತಿಯಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…