ಮಂಗಳೂರು: ಕೊರೊನಾ ವೈರಸ್ ಸೋಂಕಿತರ ಪ್ರಕರಣ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ ಎಲ್ಲಾ ಪರೀಕ್ಷೆಗಳೂ ನೆಗೆಟಿವ್ ಬಂದಿದೆ. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಒಂದೇ ದಿನ 17 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 14 ಸ್ಯಾಂಪಲ್ ಗಳ ಪರಿಕ್ಷಾ ವರದಿ ಲಭ್ಯವಾಗಿದ್ದು, ಇದರಲ್ಲಿ 9 ನೆಗೆಟಿವ್ ವರದಿ ಲಭಿಸಿದೆ.ಉಳಿದ ಐದು ಮಂದಿಯ ವರದಿ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯಲ್ಲಿ ಸೋಮವಾರದಂದು ಎಲ್ಲವೂ ನೆಗೆಟಿವ್ ಪ್ರಕರಣಗಳೇ ದಾಖಲಾಗಿದೆ.
ಆದರೆ ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚುತ್ತಿದೆ. ಸೋಮವಾರ ಮತ್ತೆ 17 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ 106 ಕ್ಕೆ ಏರಿದೆ. ಒಟ್ಟು ಕೇರಳದಲ್ಲಿ ಕೇರಳದಲ್ಲಿ 213 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ 106 ಮಂದಿ ಕಾಸರಗೋಡು ಜಿಲ್ಲೆಯವರು ಎಂಬುದು ದಕ ಜಿಲ್ಲೆಯ ಮಂದಿಯೂ ಆತಂಕದ ಸಂಗತಿಯಾಗಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…