ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸೋಮವಾರವೂ ಶುಭಸುದ್ದಿ. ಸೋಮವಾರ ಕೂಡಾ ಕೊರೊನಾ ವೈರಸ್ ಯಾವುದೇ ಪಾಸಿಟಿವ್ ಕೇಸ್ ಗಳು ಇಲ್ಲ. ಅದರ ಜೊತೆಗೆ ಸುಳ್ಯದ ಅಜ್ಜಾವರದ ಯುವಕ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 12 ಮಂದಿ ಕೊರೊನಾ ಸೋಂಕಿತರಲ್ಲಿ 8 ಮಂದಿ ಗುಣಮುಖರಾದಂತಾಗಿದೆ.
ಬೆಂಗಳೂರು, ಮೈಸೂರು ನಂತರ 3 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಇದೀಗ 6 ನೇ ಸ್ಥಾನಕ್ಕಿಳಿದಿದೆ. ಜಿಲ್ಲೆಯ ಮಟ್ಟಿಗೆ ಇದು ಸಮಾಧಾನಕರ ಸಂಗತಿ. ಆದರೂ, ಇನ್ನೂ ಬಹಳಷ್ಟು ಜಾಗರೂಕರಾಗಿರಬೇಕಿದೆ. ಜಿಲ್ಲೆಯಲ್ಲಿ 12 ಪ್ರಕರಣಗಳಲ್ಲಿ 8 ಮಂದಿ ಗುಣಮುಖರಾಗಿದ್ದಾರೆ.
ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ಸುಳ್ಯ ಅಜ್ಜಾವರದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿರಂತರ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸಿದ ಅವರು, ಸಂಪೂರ್ಣ ಗುಣಮುಖರಾಗಿದ್ದಾರೆ. ಎ. 11, 12ರಂದು ಮತ್ತೆ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಸೋಮವಾರದಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…