ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸೋಮವಾರವೂ ಶುಭಸುದ್ದಿ. ಸೋಮವಾರ ಕೂಡಾ ಕೊರೊನಾ ವೈರಸ್ ಯಾವುದೇ ಪಾಸಿಟಿವ್ ಕೇಸ್ ಗಳು ಇಲ್ಲ. ಅದರ ಜೊತೆಗೆ ಸುಳ್ಯದ ಅಜ್ಜಾವರದ ಯುವಕ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 12 ಮಂದಿ ಕೊರೊನಾ ಸೋಂಕಿತರಲ್ಲಿ 8 ಮಂದಿ ಗುಣಮುಖರಾದಂತಾಗಿದೆ.
ಬೆಂಗಳೂರು, ಮೈಸೂರು ನಂತರ 3 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಇದೀಗ 6 ನೇ ಸ್ಥಾನಕ್ಕಿಳಿದಿದೆ. ಜಿಲ್ಲೆಯ ಮಟ್ಟಿಗೆ ಇದು ಸಮಾಧಾನಕರ ಸಂಗತಿ. ಆದರೂ, ಇನ್ನೂ ಬಹಳಷ್ಟು ಜಾಗರೂಕರಾಗಿರಬೇಕಿದೆ. ಜಿಲ್ಲೆಯಲ್ಲಿ 12 ಪ್ರಕರಣಗಳಲ್ಲಿ 8 ಮಂದಿ ಗುಣಮುಖರಾಗಿದ್ದಾರೆ.
ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ಸುಳ್ಯ ಅಜ್ಜಾವರದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿರಂತರ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸಿದ ಅವರು, ಸಂಪೂರ್ಣ ಗುಣಮುಖರಾಗಿದ್ದಾರೆ. ಎ. 11, 12ರಂದು ಮತ್ತೆ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಸೋಮವಾರದಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…