ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸೋಮವಾರವೂ ಶುಭಸುದ್ದಿ. ಸೋಮವಾರ ಕೂಡಾ ಕೊರೊನಾ ವೈರಸ್ ಯಾವುದೇ ಪಾಸಿಟಿವ್ ಕೇಸ್ ಗಳು ಇಲ್ಲ. ಅದರ ಜೊತೆಗೆ ಸುಳ್ಯದ ಅಜ್ಜಾವರದ ಯುವಕ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 12 ಮಂದಿ ಕೊರೊನಾ ಸೋಂಕಿತರಲ್ಲಿ 8 ಮಂದಿ ಗುಣಮುಖರಾದಂತಾಗಿದೆ.
ಬೆಂಗಳೂರು, ಮೈಸೂರು ನಂತರ 3 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಇದೀಗ 6 ನೇ ಸ್ಥಾನಕ್ಕಿಳಿದಿದೆ. ಜಿಲ್ಲೆಯ ಮಟ್ಟಿಗೆ ಇದು ಸಮಾಧಾನಕರ ಸಂಗತಿ. ಆದರೂ, ಇನ್ನೂ ಬಹಳಷ್ಟು ಜಾಗರೂಕರಾಗಿರಬೇಕಿದೆ. ಜಿಲ್ಲೆಯಲ್ಲಿ 12 ಪ್ರಕರಣಗಳಲ್ಲಿ 8 ಮಂದಿ ಗುಣಮುಖರಾಗಿದ್ದಾರೆ.
ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ಸುಳ್ಯ ಅಜ್ಜಾವರದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿರಂತರ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸಿದ ಅವರು, ಸಂಪೂರ್ಣ ಗುಣಮುಖರಾಗಿದ್ದಾರೆ. ಎ. 11, 12ರಂದು ಮತ್ತೆ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಸೋಮವಾರದಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…