ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸೋಮವಾರವೂ ಶುಭಸುದ್ದಿ. ಸೋಮವಾರ ಕೂಡಾ ಕೊರೊನಾ ವೈರಸ್ ಯಾವುದೇ ಪಾಸಿಟಿವ್ ಕೇಸ್ ಗಳು ಇಲ್ಲ. ಅದರ ಜೊತೆಗೆ ಸುಳ್ಯದ ಅಜ್ಜಾವರದ ಯುವಕ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 12 ಮಂದಿ ಕೊರೊನಾ ಸೋಂಕಿತರಲ್ಲಿ 8 ಮಂದಿ ಗುಣಮುಖರಾದಂತಾಗಿದೆ.
ಬೆಂಗಳೂರು, ಮೈಸೂರು ನಂತರ 3 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಇದೀಗ 6 ನೇ ಸ್ಥಾನಕ್ಕಿಳಿದಿದೆ. ಜಿಲ್ಲೆಯ ಮಟ್ಟಿಗೆ ಇದು ಸಮಾಧಾನಕರ ಸಂಗತಿ. ಆದರೂ, ಇನ್ನೂ ಬಹಳಷ್ಟು ಜಾಗರೂಕರಾಗಿರಬೇಕಿದೆ. ಜಿಲ್ಲೆಯಲ್ಲಿ 12 ಪ್ರಕರಣಗಳಲ್ಲಿ 8 ಮಂದಿ ಗುಣಮುಖರಾಗಿದ್ದಾರೆ.
ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ಸುಳ್ಯ ಅಜ್ಜಾವರದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿರಂತರ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸಿದ ಅವರು, ಸಂಪೂರ್ಣ ಗುಣಮುಖರಾಗಿದ್ದಾರೆ. ಎ. 11, 12ರಂದು ಮತ್ತೆ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಸೋಮವಾರದಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…