ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಶುಕ್ರವಾರ “ಗುಡ್” ಪ್ರೈಡೇ. ಜಿಲ್ಲೆಯಲ್ಲಿ ಶುಕ್ರವಾರವೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ. ಅದಕ್ಕಿಂತಲೂ 12 ಮಂದಿ ಸೋಂಕಿತರಲ್ಲಿ ಒಟ್ಟು 5 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಈ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಶುಕ್ರವಾರದಂದೂ ಕೂಡ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಈ ನಡುವೆ ಮಾ. 21ರಂದು ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ತಕ್ಷಣ ಆರೋಗ್ಯ ಇಲಾಖೆ ಅವರಿಗೆ ತೀವ್ರ ನಿಗಾದಲ್ಲಿರಿಸಿ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಅವರು ಗುಣಮುಖರಾಗಿದ್ದಾರೆ ಎಂದು ವಿವರ ನೀಡಿದರು. ಇದುವರೆಗೆ 402 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ನಡುವೆ ಕಾಸರಗೋಡಿನಲ್ಲಿ ಶುಕ್ರವಾರ ಮೂವರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 163ಕ್ಕೆ ತಲುಪಿದೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…