ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ 1 ಪಾಸಿಟಿವ್ | ಕಾಸರಗೋಡಿನಲ್ಲಿ 2 ಪಾಸಿಟಿವ್ | ಸುಳ್ಯದಲ್ಲಿ ಮುಂಜಾಗ್ರತಾ ಕ್ರಮ |

March 31, 2020
8:37 PM

ಮಂಗಳೂರು/ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಂಗಳವಾರ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.  ಈ ಮೂಲಕ ರಾಜ್ಯದಲ್ಲಿ ಒಟ್ಟು101 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.  ಇದೇ ಸಂದರ್ಭ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದಂದು 2 ಪಾಸಿಟಿವ್ ಪ್ರಕರಣಗಳು  ದೃಢಪಟ್ಟಿವೆ. ಉಡುಪಿಯಲ್ಲಿ  ಯಾವುದೇ ಪ್ರಕರಣ ಕಂಡುಬಂದಿಲ್ಲ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸುಳ್ಯ ಮೂಲಕ ವ್ಯಕ್ತಿಯಾಗಿರುವ 34 ವರ್ಷದ ಯುವಕ ದುಬೈನಿಂದ ಆಗಮಿಸಿದ್ದ.  ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ಈ ಯುವಕ ಮಾ. 18 ರಂದು ವಿದೇಶದಿಂದ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭದಲ್ಲಿ ಕೊರೊನಾ ವೈರಸ್ ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋ ಕ್ವಾರಂಟೆನ್ ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾ.28 ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಪರೀಕ್ಷಾ ವರದಿ ಮಾ.31 ರ ಮಂಗಳವಾರ ಲಭ್ಯವಾಗಿದ್ದು ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಈ ಯುವಕ ಸದ್ಯ ಆರೋಗ್ಯವಾಗಿದ್ದ ಯಾವುದೇ ಆತಂಕವಿಲ್ಲ. ಚಿಕಿತ್ಸೆ ಮುಂದುವರಿದೆ.

Advertisement

ಮಂಗಳವಾರದಂದು ಒಟ್ಟು 41 ಮಂದಿ ಸ್ಕ್ರೀನಿಂಗ್ ಗೆ ಒಳಪಟ್ಟಿದ್ದು ಇದುವರೆಗೆ  5875 ಮಂದಿ ನಿಗಾದಲ್ಲಿದ್ದಾರೆ.

ಕಾಸರಗೋಡಿನಲ್ಲಿ  2  ಕೊರೊನಾ ವೈರಸ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ.

Advertisement

ಸುಳ್ಯದಲ್ಲಿ  ಮುಂಜಾಗ್ರತಾ ಕ್ರಮ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ದುಬೈಯಿಂದ ಆಗಮಿಸಿದ ಯುವಕನಿಗೆ ಕೊರೊನಾ ವೈರಸ್ ಪಾಸಿಟವ್ ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ  ಈ ಯುವಕನ ನೇರ ಸಂಪರ್ಕದಲ್ಲಿ ಇದ್ದವರನ್ನು  ಹಾಗೂ ಆತನ ಸಂಪರ್ಕದಲ್ಲಿದ್ದವರನ್ನು ಹೋಕ್ವಾರಂಟೇನ್ ಗೆ ಸಿದ್ಧತೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಸಿ್ದ್ಧತೆಗೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಸಿದ್ಧತೆ ನಡೆಸಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |
May 12, 2024
11:56 AM
by: ಸಾಯಿಶೇಖರ್ ಕರಿಕಳ
ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ : ಗೋಕೃಪಾಮೃತ ಇರುವಾಗ ಮಾರುಕಟ್ಟೆಯಲ್ಲಿನ ದುಬಾರಿ ಕೃಷಿ ಗೊಬ್ಬರ & ಕ್ರಿಮಿನಾಶಕಗಳ ಹಂಗೇಕೆ?
May 12, 2024
11:53 AM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ
May 12, 2024
11:10 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror