ಮಂಗಳೂರು/ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು101 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಇದೇ ಸಂದರ್ಭ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದಂದು 2 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಉಡುಪಿಯಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸುಳ್ಯ ಮೂಲಕ ವ್ಯಕ್ತಿಯಾಗಿರುವ 34 ವರ್ಷದ ಯುವಕ ದುಬೈನಿಂದ ಆಗಮಿಸಿದ್ದ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ಈ ಯುವಕ ಮಾ. 18 ರಂದು ವಿದೇಶದಿಂದ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭದಲ್ಲಿ ಕೊರೊನಾ ವೈರಸ್ ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋ ಕ್ವಾರಂಟೆನ್ ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾ.28 ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಪರೀಕ್ಷಾ ವರದಿ ಮಾ.31 ರ ಮಂಗಳವಾರ ಲಭ್ಯವಾಗಿದ್ದು ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಈ ಯುವಕ ಸದ್ಯ ಆರೋಗ್ಯವಾಗಿದ್ದ ಯಾವುದೇ ಆತಂಕವಿಲ್ಲ. ಚಿಕಿತ್ಸೆ ಮುಂದುವರಿದೆ.
ಮಂಗಳವಾರದಂದು ಒಟ್ಟು 41 ಮಂದಿ ಸ್ಕ್ರೀನಿಂಗ್ ಗೆ ಒಳಪಟ್ಟಿದ್ದು ಇದುವರೆಗೆ 5875 ಮಂದಿ ನಿಗಾದಲ್ಲಿದ್ದಾರೆ.
ಕಾಸರಗೋಡಿನಲ್ಲಿ 2 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ.
ಸುಳ್ಯದಲ್ಲಿ ಮುಂಜಾಗ್ರತಾ ಕ್ರಮ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ದುಬೈಯಿಂದ ಆಗಮಿಸಿದ ಯುವಕನಿಗೆ ಕೊರೊನಾ ವೈರಸ್ ಪಾಸಿಟವ್ ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ ಈ ಯುವಕನ ನೇರ ಸಂಪರ್ಕದಲ್ಲಿ ಇದ್ದವರನ್ನು ಹಾಗೂ ಆತನ ಸಂಪರ್ಕದಲ್ಲಿದ್ದವರನ್ನು ಹೋಕ್ವಾರಂಟೇನ್ ಗೆ ಸಿದ್ಧತೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಸಿ್ದ್ಧತೆಗೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಸಿದ್ಧತೆ ನಡೆಸಿದೆ.
ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…