ಮಂಗಳೂರು/ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು101 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಇದೇ ಸಂದರ್ಭ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದಂದು 2 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಉಡುಪಿಯಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸುಳ್ಯ ಮೂಲಕ ವ್ಯಕ್ತಿಯಾಗಿರುವ 34 ವರ್ಷದ ಯುವಕ ದುಬೈನಿಂದ ಆಗಮಿಸಿದ್ದ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ಈ ಯುವಕ ಮಾ. 18 ರಂದು ವಿದೇಶದಿಂದ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭದಲ್ಲಿ ಕೊರೊನಾ ವೈರಸ್ ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋ ಕ್ವಾರಂಟೆನ್ ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾ.28 ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಪರೀಕ್ಷಾ ವರದಿ ಮಾ.31 ರ ಮಂಗಳವಾರ ಲಭ್ಯವಾಗಿದ್ದು ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಈ ಯುವಕ ಸದ್ಯ ಆರೋಗ್ಯವಾಗಿದ್ದ ಯಾವುದೇ ಆತಂಕವಿಲ್ಲ. ಚಿಕಿತ್ಸೆ ಮುಂದುವರಿದೆ.
ಮಂಗಳವಾರದಂದು ಒಟ್ಟು 41 ಮಂದಿ ಸ್ಕ್ರೀನಿಂಗ್ ಗೆ ಒಳಪಟ್ಟಿದ್ದು ಇದುವರೆಗೆ 5875 ಮಂದಿ ನಿಗಾದಲ್ಲಿದ್ದಾರೆ.
ಕಾಸರಗೋಡಿನಲ್ಲಿ 2 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ.
ಸುಳ್ಯದಲ್ಲಿ ಮುಂಜಾಗ್ರತಾ ಕ್ರಮ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ದುಬೈಯಿಂದ ಆಗಮಿಸಿದ ಯುವಕನಿಗೆ ಕೊರೊನಾ ವೈರಸ್ ಪಾಸಿಟವ್ ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ ಈ ಯುವಕನ ನೇರ ಸಂಪರ್ಕದಲ್ಲಿ ಇದ್ದವರನ್ನು ಹಾಗೂ ಆತನ ಸಂಪರ್ಕದಲ್ಲಿದ್ದವರನ್ನು ಹೋಕ್ವಾರಂಟೇನ್ ಗೆ ಸಿದ್ಧತೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಸಿ್ದ್ಧತೆಗೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಸಿದ್ಧತೆ ನಡೆಸಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…