Advertisement
ಸುದ್ದಿಗಳು

ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ 1 ಪಾಸಿಟಿವ್ | ಕಾಸರಗೋಡಿನಲ್ಲಿ 2 ಪಾಸಿಟಿವ್ | ಸುಳ್ಯದಲ್ಲಿ ಮುಂಜಾಗ್ರತಾ ಕ್ರಮ |

Share

ಮಂಗಳೂರು/ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಂಗಳವಾರ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.  ಈ ಮೂಲಕ ರಾಜ್ಯದಲ್ಲಿ ಒಟ್ಟು101 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.  ಇದೇ ಸಂದರ್ಭ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದಂದು 2 ಪಾಸಿಟಿವ್ ಪ್ರಕರಣಗಳು  ದೃಢಪಟ್ಟಿವೆ. ಉಡುಪಿಯಲ್ಲಿ  ಯಾವುದೇ ಪ್ರಕರಣ ಕಂಡುಬಂದಿಲ್ಲ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸುಳ್ಯ ಮೂಲಕ ವ್ಯಕ್ತಿಯಾಗಿರುವ 34 ವರ್ಷದ ಯುವಕ ದುಬೈನಿಂದ ಆಗಮಿಸಿದ್ದ.  ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ಈ ಯುವಕ ಮಾ. 18 ರಂದು ವಿದೇಶದಿಂದ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭದಲ್ಲಿ ಕೊರೊನಾ ವೈರಸ್ ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋ ಕ್ವಾರಂಟೆನ್ ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾ.28 ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಪರೀಕ್ಷಾ ವರದಿ ಮಾ.31 ರ ಮಂಗಳವಾರ ಲಭ್ಯವಾಗಿದ್ದು ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಈ ಯುವಕ ಸದ್ಯ ಆರೋಗ್ಯವಾಗಿದ್ದ ಯಾವುದೇ ಆತಂಕವಿಲ್ಲ. ಚಿಕಿತ್ಸೆ ಮುಂದುವರಿದೆ.

ಮಂಗಳವಾರದಂದು ಒಟ್ಟು 41 ಮಂದಿ ಸ್ಕ್ರೀನಿಂಗ್ ಗೆ ಒಳಪಟ್ಟಿದ್ದು ಇದುವರೆಗೆ  5875 ಮಂದಿ ನಿಗಾದಲ್ಲಿದ್ದಾರೆ.

ಕಾಸರಗೋಡಿನಲ್ಲಿ  2  ಕೊರೊನಾ ವೈರಸ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ.

ಸುಳ್ಯದಲ್ಲಿ  ಮುಂಜಾಗ್ರತಾ ಕ್ರಮ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ದುಬೈಯಿಂದ ಆಗಮಿಸಿದ ಯುವಕನಿಗೆ ಕೊರೊನಾ ವೈರಸ್ ಪಾಸಿಟವ್ ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ  ಈ ಯುವಕನ ನೇರ ಸಂಪರ್ಕದಲ್ಲಿ ಇದ್ದವರನ್ನು  ಹಾಗೂ ಆತನ ಸಂಪರ್ಕದಲ್ಲಿದ್ದವರನ್ನು ಹೋಕ್ವಾರಂಟೇನ್ ಗೆ ಸಿದ್ಧತೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಸಿ್ದ್ಧತೆಗೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಸಿದ್ಧತೆ ನಡೆಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

7 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

8 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

8 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

8 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

9 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

9 hours ago