Advertisement
ಸುದ್ದಿಗಳು

ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ 1 ಪಾಸಿಟಿವ್ | ಕಾಸರಗೋಡಿನಲ್ಲಿ 2 ಪಾಸಿಟಿವ್ | ಸುಳ್ಯದಲ್ಲಿ ಮುಂಜಾಗ್ರತಾ ಕ್ರಮ |

Share

ಮಂಗಳೂರು/ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಂಗಳವಾರ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.  ಈ ಮೂಲಕ ರಾಜ್ಯದಲ್ಲಿ ಒಟ್ಟು101 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.  ಇದೇ ಸಂದರ್ಭ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದಂದು 2 ಪಾಸಿಟಿವ್ ಪ್ರಕರಣಗಳು  ದೃಢಪಟ್ಟಿವೆ. ಉಡುಪಿಯಲ್ಲಿ  ಯಾವುದೇ ಪ್ರಕರಣ ಕಂಡುಬಂದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸುಳ್ಯ ಮೂಲಕ ವ್ಯಕ್ತಿಯಾಗಿರುವ 34 ವರ್ಷದ ಯುವಕ ದುಬೈನಿಂದ ಆಗಮಿಸಿದ್ದ.  ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ಈ ಯುವಕ ಮಾ. 18 ರಂದು ವಿದೇಶದಿಂದ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭದಲ್ಲಿ ಕೊರೊನಾ ವೈರಸ್ ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋ ಕ್ವಾರಂಟೆನ್ ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾ.28 ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಪರೀಕ್ಷಾ ವರದಿ ಮಾ.31 ರ ಮಂಗಳವಾರ ಲಭ್ಯವಾಗಿದ್ದು ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಈ ಯುವಕ ಸದ್ಯ ಆರೋಗ್ಯವಾಗಿದ್ದ ಯಾವುದೇ ಆತಂಕವಿಲ್ಲ. ಚಿಕಿತ್ಸೆ ಮುಂದುವರಿದೆ.

ಮಂಗಳವಾರದಂದು ಒಟ್ಟು 41 ಮಂದಿ ಸ್ಕ್ರೀನಿಂಗ್ ಗೆ ಒಳಪಟ್ಟಿದ್ದು ಇದುವರೆಗೆ  5875 ಮಂದಿ ನಿಗಾದಲ್ಲಿದ್ದಾರೆ.

ಕಾಸರಗೋಡಿನಲ್ಲಿ  2  ಕೊರೊನಾ ವೈರಸ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ.

ಸುಳ್ಯದಲ್ಲಿ  ಮುಂಜಾಗ್ರತಾ ಕ್ರಮ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ದುಬೈಯಿಂದ ಆಗಮಿಸಿದ ಯುವಕನಿಗೆ ಕೊರೊನಾ ವೈರಸ್ ಪಾಸಿಟವ್ ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ  ಈ ಯುವಕನ ನೇರ ಸಂಪರ್ಕದಲ್ಲಿ ಇದ್ದವರನ್ನು  ಹಾಗೂ ಆತನ ಸಂಪರ್ಕದಲ್ಲಿದ್ದವರನ್ನು ಹೋಕ್ವಾರಂಟೇನ್ ಗೆ ಸಿದ್ಧತೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಸಿ್ದ್ಧತೆಗೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಸಿದ್ಧತೆ ನಡೆಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

10 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

19 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

19 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

20 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago