ಮಂಗಳೂರು: ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಬುಧವಾರ 17 ಮಂದಿಯ ವರದಿ ಬಂದಿದ್ದು ಇದರಲ್ಲಿ 16 ಮಂದಿಯ ಪರೀಕ್ಷಾ ವದರಿ ನೆಗೆಟಿವ್ ಬಂದಿದ್ದು 1 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಪುತ್ತೂರು ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.
ಮಾ.20 ರಂದು ಪುತ್ತೂರು ಮೂಲಕ 43 ವರ್ಷದ ಪುರುಷ ದುಬೈನಿಂದ ಬಂದಿದ್ದರು. ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದರು. ಇದೀಗ ಸೋಂಕು ದೃಢಪಟ್ಟಿದೆ.
ಬುಧವಾರದಂದು 16 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು 43 ಮಂದಿ ಕ್ವಾಂರೆಟೈನ್ ನಲ್ಲಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗುವ ಮೂಲಕ 110 ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಉಡುಪಿಯಲ್ಲಿ ಪಾಸಿಟವ್ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಬುಧವಾರ ಕೂಡಾ ಕೊರೊನಾ ವೈರಸ್ ಪಾಸಿಟಿವ್ ವರದಿಗಳು ಬಂದಿವೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…