ಕೊರೊನಾ ವೈರಸ್ | ದ ಕ ಜಿಲ್ಲೆಯ ಭಾನುವಾರದ ಅಪ್ಡೇಟ್ಸ್ “ಕಹಿ” | ಬಂಟ್ವಾಳದ ಮೃತ ಮಹಿಳೆಗೆ ಕೊರೊನಾ ಪಾಸಿಟಿವ್ | ಉಪ್ಪಿನಂಗಡಿಯಲ್ಲಿ ಇನ್ನೊಂದು ಪಾಸಿಟಿವ್ |

April 19, 2020
8:53 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ 13 ದಿನಗಳಿಂದ ನೆಮ್ಮದಿಯಾಗಿತ್ತು. ಇದೀಗ ಭಾನುವಾರ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಬಂಟ್ವಾಳದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರ ಬೆನ್ನಲ್ಲೇ ಉಪ್ಪಿನಂಗಡಿಯಲ್ಲೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Advertisement
Advertisement

ಎ.17ರಂದು ಉಪ್ಪಿನಂಗಡಿ ಮೂಲದ ವ್ಯಕ್ತಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು.ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ  ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅದೇ ವ್ಯಕ್ತಿಯ ಪತ್ನಿಯಲ್ಲಿ ಏಪ್ರಿಲ್ 19ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಬಂಟ್ವಾಳ ನಗರ ಸೀಲ್ ಡೌನ್:

ಕೊರೊನಾ ವೈರಸ್ ಗೆ ಬಂಟ್ವಾಳದ ಮಹಿಳೆ ಮೃತಪಟ್ಟ ಬೆನ್ನಲ್ಲೇ ಬಂಟ್ವಾಳ ನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಬಂಟ್ವಾಳ ಕಸಬಾ, ಜಕ್ರಿಬೆಟ್ಟು, ಬಡ್ಡಕಟ್ಟೆ ಸಹಿತ ಪಟ್ಟಣಕ್ಕೆ ಪ್ರವೇಶಿಸುವ ಮತ್ತು ಹೊರ ಹೋಗುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸಾವನ್ನಪ್ಪಿರುವ ಮಹಿಳೆಯ ಮನೆ ಬಂಟ್ವಾಳ ಪೇಟೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಅದರ ಸುತ್ತಮುತ್ತ ಸುಮಾರು 300ಕ್ಕೂ ಅಧಿಕ ಮನೆಗಳು, ಅಂಗಡಿ ಮುಂಗಟ್ಟುಗಳಿವೆ. ಈ ಎಲ್ಲಾ ಪ್ರದೇಶಗಳಿಗೂ ಪೊಲೀಸರು ತೆರಳಿ ಮನೆಯಿಂದ ಯಾರೂ ಹೊರ ಬರದಂತೆ ಸೂಚಿಸುತ್ತಿದ್ದಾರೆ. ಒಟ್ಟು 3 ಭಾಗವಾಗಿ ಸೀಲ್ ಮಾಡಲಾಗಿದೆ.  ಮೃತ ಮಹಿಳೆಯ ಮನೆಯಿಂದ 100 ಮೀ. ಅಂತರದಲ್ಲಿ ಕಠಿಣ ಲಾಕ್ಡೌನ್,   ಸುತ್ತ 500 ಮೀ. ಅಂತರದಲ್ಲಿ ತೀವ್ರ ನಿಗಾ ಹಾಗೂ 3. 3 ಕಿ.ಮೀ. ಅಂತರದಲ್ಲಿ ಕಂಪ್ಲೀಟ್ ಸೀಲ್ಡೌನ್.

ಕೊರೊನಾ ಸೊಂಕಿಗೆ ಬಲಿಯಾದ ಮಹಿಳೆಯ ಕುಟುಂಬದ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಮೃತರ ಅತ್ತೆಯನ್ನು ಐಸಿಯುಗೆ ದಾಖಲಿಸಲಾಗಿದೆ. ಅವರೊಂದಿಗೆ ಮಹಿಳೆಯ ಪತಿ ಹಾಗೂ ವಿದೇಶದಿಂದ ಬಂದಿದ್ದ ಮಗನನ್ನು ಕೂಡ ಕ್ವಾರಂಟೈನ್ ಗೆ  ಒಳಪಡಿಸಲಾಗಿದೆ. ಮೃತ ಮಹಿಳೆಯ ಪುತ್ರನಿಗೆ ವಿದೇಶ ಪ್ರವಾಸದ ಹಿಸ್ಟರಿ ಇದೆ ಎನ್ನಲಾಗಿದೆ. ಆದರೆ ಅವರಿಗೆ ಕೊರೊನಾ ವೈರಸ್ ಕಂಡುಬಂದಿರಲಿಲ್ಲ.  ಇದೀಗ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದ 20 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 10 ಮಂದಿಗಾಗಿ ಹುಡುಕಾಟ ನಡೆದಿದೆ.

Advertisement

 

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ
June 24, 2025
9:02 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ
June 24, 2025
8:41 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group