Advertisement
ಸುದ್ದಿಗಳು

ಕೊರೊನಾ ವೈರಸ್ | ದ ಕ ಜಿಲ್ಲೆಯ ಭಾನುವಾರದ ಅಪ್ಡೇಟ್ಸ್ “ಕಹಿ” | ಬಂಟ್ವಾಳದ ಮೃತ ಮಹಿಳೆಗೆ ಕೊರೊನಾ ಪಾಸಿಟಿವ್ | ಉಪ್ಪಿನಂಗಡಿಯಲ್ಲಿ ಇನ್ನೊಂದು ಪಾಸಿಟಿವ್ |

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ 13 ದಿನಗಳಿಂದ ನೆಮ್ಮದಿಯಾಗಿತ್ತು. ಇದೀಗ ಭಾನುವಾರ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಬಂಟ್ವಾಳದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರ ಬೆನ್ನಲ್ಲೇ ಉಪ್ಪಿನಂಗಡಿಯಲ್ಲೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Advertisement
Advertisement

ಎ.17ರಂದು ಉಪ್ಪಿನಂಗಡಿ ಮೂಲದ ವ್ಯಕ್ತಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು.ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ  ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅದೇ ವ್ಯಕ್ತಿಯ ಪತ್ನಿಯಲ್ಲಿ ಏಪ್ರಿಲ್ 19ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಬಂಟ್ವಾಳ ನಗರ ಸೀಲ್ ಡೌನ್:

ಕೊರೊನಾ ವೈರಸ್ ಗೆ ಬಂಟ್ವಾಳದ ಮಹಿಳೆ ಮೃತಪಟ್ಟ ಬೆನ್ನಲ್ಲೇ ಬಂಟ್ವಾಳ ನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಬಂಟ್ವಾಳ ಕಸಬಾ, ಜಕ್ರಿಬೆಟ್ಟು, ಬಡ್ಡಕಟ್ಟೆ ಸಹಿತ ಪಟ್ಟಣಕ್ಕೆ ಪ್ರವೇಶಿಸುವ ಮತ್ತು ಹೊರ ಹೋಗುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸಾವನ್ನಪ್ಪಿರುವ ಮಹಿಳೆಯ ಮನೆ ಬಂಟ್ವಾಳ ಪೇಟೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಅದರ ಸುತ್ತಮುತ್ತ ಸುಮಾರು 300ಕ್ಕೂ ಅಧಿಕ ಮನೆಗಳು, ಅಂಗಡಿ ಮುಂಗಟ್ಟುಗಳಿವೆ. ಈ ಎಲ್ಲಾ ಪ್ರದೇಶಗಳಿಗೂ ಪೊಲೀಸರು ತೆರಳಿ ಮನೆಯಿಂದ ಯಾರೂ ಹೊರ ಬರದಂತೆ ಸೂಚಿಸುತ್ತಿದ್ದಾರೆ. ಒಟ್ಟು 3 ಭಾಗವಾಗಿ ಸೀಲ್ ಮಾಡಲಾಗಿದೆ.  ಮೃತ ಮಹಿಳೆಯ ಮನೆಯಿಂದ 100 ಮೀ. ಅಂತರದಲ್ಲಿ ಕಠಿಣ ಲಾಕ್ಡೌನ್,   ಸುತ್ತ 500 ಮೀ. ಅಂತರದಲ್ಲಿ ತೀವ್ರ ನಿಗಾ ಹಾಗೂ 3. 3 ಕಿ.ಮೀ. ಅಂತರದಲ್ಲಿ ಕಂಪ್ಲೀಟ್ ಸೀಲ್ಡೌನ್.

ಕೊರೊನಾ ಸೊಂಕಿಗೆ ಬಲಿಯಾದ ಮಹಿಳೆಯ ಕುಟುಂಬದ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಮೃತರ ಅತ್ತೆಯನ್ನು ಐಸಿಯುಗೆ ದಾಖಲಿಸಲಾಗಿದೆ. ಅವರೊಂದಿಗೆ ಮಹಿಳೆಯ ಪತಿ ಹಾಗೂ ವಿದೇಶದಿಂದ ಬಂದಿದ್ದ ಮಗನನ್ನು ಕೂಡ ಕ್ವಾರಂಟೈನ್ ಗೆ  ಒಳಪಡಿಸಲಾಗಿದೆ. ಮೃತ ಮಹಿಳೆಯ ಪುತ್ರನಿಗೆ ವಿದೇಶ ಪ್ರವಾಸದ ಹಿಸ್ಟರಿ ಇದೆ ಎನ್ನಲಾಗಿದೆ. ಆದರೆ ಅವರಿಗೆ ಕೊರೊನಾ ವೈರಸ್ ಕಂಡುಬಂದಿರಲಿಲ್ಲ.  ಇದೀಗ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದ 20 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 10 ಮಂದಿಗಾಗಿ ಹುಡುಕಾಟ ನಡೆದಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

8 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago