ಮಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ಸರಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಇದರ ಬಳಿಕ ಬೆಂಗಳೂರು ನಗರವನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರವು ಕೊರೊನಾ ಹಾಟ್ ಸ್ಫಾಟ್ ಎಂದು ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 4 ಜಿಲ್ಲೆಗಳನ್ನು ಕೊರೊನಾ ವೈರಸ್ ರೆಡ್ ಝೋನ್ ಎಂದು ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉತ್ತರಕನ್ನಡ, ಮೈಸೂರು ಹಾಗೂ ಚಿಕ್ಕಬಳ್ಳಾಪುರ ರೆಡ್ ಝೋನ್ ಘೋಷಣೆಗೆ ಒಳಗಾದ ಜಿಲ್ಲೆಗಳು.
ಕೊರೊನಾ ವೈರಸ್ ಹರಡುವುದು ತಡೆಯಲು ಹಾಗೂ ಕೆಲವು ಗ್ರಾಮಗಳ ಮೂಲಕ ಕೊರೊನಾ ವೈರಸ್ ಹರಡಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಸರಕಾರವು ರೆಡ್ ಝೋನ್ ಘೋಷಣೆಗೆ ಒಳಗಾದ ಜಿಲ್ಲೆಗಳ ಮೇಲೆ ತೀವ್ರ ನಿಗಾ ಇರಿಸಿದೆ. ಇಲ್ಲಿ ವಿಶೇಷ ಜಾಗೃತಿ ಮೂಡಿಸುವುದು ಹಾಗೂ ಕ್ವಾರಂಟೈನ್ ನಲ್ಲಿ ಇರುವವರ ಮೇಲೆ ತೀವ್ರ ನಿಗಾ ಇಡುವುದು ಹಾಗೂ ಲಾಕ್ಡೌನ್ ಬಿಗಿ ಮಾಡುವುದು ಇದರ ಉದ್ದೇಶ.
ದಕ್ಷಿಣ ಕನ್ನಡ ಜಿಲ್ಲೆಗೆ ತಾಗಿಕೊಂಡಂತೆ ಕಾಸರಗೋಡು ಜಿಲ್ಲೆ ಇರುವುದರಿಂದ ಕೊರೊನಾ ವೈರಸ್ ಹರಡಂತೆ ಕ್ರಮ ವಹಿಸಲಾಗುತ್ತಿದೆ. ಈಗಾಗಲೇ ಕಾಸರಗೋಡು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇರುವುದರಿಂದ ಬಿಗಿಯಾದ ಕ್ರಮ ಕೈಗೊಳ್ಳಲಾಗುತ್ತಿದೆ.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…