ಮಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ಸರಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಇದರ ಬಳಿಕ ಬೆಂಗಳೂರು ನಗರವನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರವು ಕೊರೊನಾ ಹಾಟ್ ಸ್ಫಾಟ್ ಎಂದು ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 4 ಜಿಲ್ಲೆಗಳನ್ನು ಕೊರೊನಾ ವೈರಸ್ ರೆಡ್ ಝೋನ್ ಎಂದು ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉತ್ತರಕನ್ನಡ, ಮೈಸೂರು ಹಾಗೂ ಚಿಕ್ಕಬಳ್ಳಾಪುರ ರೆಡ್ ಝೋನ್ ಘೋಷಣೆಗೆ ಒಳಗಾದ ಜಿಲ್ಲೆಗಳು.
ಕೊರೊನಾ ವೈರಸ್ ಹರಡುವುದು ತಡೆಯಲು ಹಾಗೂ ಕೆಲವು ಗ್ರಾಮಗಳ ಮೂಲಕ ಕೊರೊನಾ ವೈರಸ್ ಹರಡಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಸರಕಾರವು ರೆಡ್ ಝೋನ್ ಘೋಷಣೆಗೆ ಒಳಗಾದ ಜಿಲ್ಲೆಗಳ ಮೇಲೆ ತೀವ್ರ ನಿಗಾ ಇರಿಸಿದೆ. ಇಲ್ಲಿ ವಿಶೇಷ ಜಾಗೃತಿ ಮೂಡಿಸುವುದು ಹಾಗೂ ಕ್ವಾರಂಟೈನ್ ನಲ್ಲಿ ಇರುವವರ ಮೇಲೆ ತೀವ್ರ ನಿಗಾ ಇಡುವುದು ಹಾಗೂ ಲಾಕ್ಡೌನ್ ಬಿಗಿ ಮಾಡುವುದು ಇದರ ಉದ್ದೇಶ.
ದಕ್ಷಿಣ ಕನ್ನಡ ಜಿಲ್ಲೆಗೆ ತಾಗಿಕೊಂಡಂತೆ ಕಾಸರಗೋಡು ಜಿಲ್ಲೆ ಇರುವುದರಿಂದ ಕೊರೊನಾ ವೈರಸ್ ಹರಡಂತೆ ಕ್ರಮ ವಹಿಸಲಾಗುತ್ತಿದೆ. ಈಗಾಗಲೇ ಕಾಸರಗೋಡು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇರುವುದರಿಂದ ಬಿಗಿಯಾದ ಕ್ರಮ ಕೈಗೊಳ್ಳಲಾಗುತ್ತಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…