Advertisement
MIRROR FOCUS

ಕೊರೊನಾ ವೈರಸ್-ನಿಲ್ಲದ ರೇಸ್ | ದ ಕ ಜಿಲ್ಲೆಯಲ್ಲಿ 6 ಪಾಸಿಟಿವ್ ಪ್ರಕರಣ ಪತ್ತೆ | ರಾಜ್ಯದಲ್ಲಿ 116 ಜನರಲ್ಲಿ ಸೋಂಕು ದೃಢ

Share

ಮಂಗಳೂರು: ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಈಗ ನಿಲ್ಲದ ರೇಸ್. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಪಾಸಿಟಿವ್ ಪ್ರಕರಣ ಗುರುವಾರ ಬೆಳಗಿನವರೆಗೆ ಪತ್ತೆಯಾಗಿದೆ. ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ 27 ಪ್ರಕರಣ ಕಂಡುಬಂದರೆ ರಾಜ್ಯದಲ್ಲಿ 116 ಜನರಲ್ಲಿ ಸೋಂಕು ದೃಢಪಟ್ಟಿದ್ದು ಈ ಮೂಲಕ  ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1578 ಕ್ಕೆ ಏರಿಕೆಯಾಗಿದೆ.

Advertisement

ಆರೋಗ್ಯ ಇಲಾಖೆ  ಬಿಡುಗಡೆ ಮಾಡಿದ ಹೆಲ್ತ್  ಬುಲೆಟಿನ್ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಪಾಸಿಟಿವ್ ಹಾಗೂ ಉಡುಪಿ ಜಿಲ್ಲೆಯಲ್ಲಿ 27 ಪ್ರಕರಣ  ಪತ್ತೆಯಾಗಿದೆ. ಈ ಪೈಕಿ ದುಬೈ ಹಾಗೂ ಮುಂಬೈಯಿಂದ ಬಂದ ಪ್ರಯಾಣಿಕರಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಉಡುಪಿಯಲ್ಲಿ  16 ಮಕ್ಕಳ ಸಹಿತ 27 ಮಂದಿಯಲ್ಲಿ  ಕೊರೊನಾ ವೈರಸ್ ಪಾಸಿಟಿವ್ ಬಂದಿತ್ತು. ಆದರೆ ಎಲ್ಲರೂ ಕ್ವಾರಂಟೈನ್ ನಲ್ಲಿದ್ದವರಾಗಿದ್ದಾರೆ.

ರಾಜ್ಯದಲ್ಲಿ ಗುರುವಾರ 116 ಮಂದಿಗೆ ಕೊರೊನಾ ಪಾಸಿಟಿವ್ ಪ್ರಕರಣ ಮೂಲಕ ಸೋಂಕಿತರ ಸಂಖ್ಯೆ 1578 ಕ್ಕೆ ಏರಿಕೆಯಾಗಿದೆ. ಇದರಲ್ಲಿ 570 ಮಂದಿ ಆಸ್ಪತ್ರೆಯಿಮದ ಬಿಡುಗಡೆ ಹೊಂದಿದ್ದಾರೆ. 966 ಕ್ರಿಯಾಶೀಲ ಪ್ರಕರಣ ಇದ್ದು 41 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ  5609 ಹೊಸ  ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,12,359 ಕ್ಕೆ ಏರಿದೆ.  ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 132 ಮಂದಿ ಸಾವನ್ನಪ್ಪಿದ್ದಾರೆ.

ಜಗತ್ತಿನಾದ್ಯಂತ  3 .29 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಕೊರೊನಾ ವೈರಸ್ ಬಲಿ ಪಡೆದಿದೆ.ಒಟ್ಟು   5,090,061 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು  20.21  ಲಕ್ಷಕ್ಕೂ ಅಧಿಕ ಮಂದಿ  ಸಂಪೂರ್ಣ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಜಗತ್ತಿನಲ್ಲಿ 1,06,000 ಲಕ್ಷ ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ವಿಶ್ವದಲ್ಲಿ ಅಮೆರಿಕಾ ಮೃತಪಟ್ಟವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಕಳೆದ 24 ಗಂಟೆಗಳಲ್ಲಿ ಮತ್ತೆ 1,561 ಮಂದಿ ವೈರಸ್ ಗೆ ಬಲಿಯಾಗಿದ್ದಾರೆ.  ಅಮೆರಿಕಾದಲ್ಲಿ ಈವರೆಗೂ ಮಹಾಮಾರಿ ವೈರಸ್’ಗೆ 94,994 ಮಂದಿ ಸಾವನ್ನಪ್ಪಿದ್ದಾರೆ.  ಕೊರೊನಾದಿಂದ ತತ್ತರಿಸಿದ್ದ ಇಟಲಿ, ಸ್ಪೇನ್ ಮುಂತಾದ ಕಡೆ ನಿಧಾನವಾಗಿ ಲಾಕ್ ಡೌನ್ ಸಡಿಲಿಸಲಾಗಿದೆ. ಇದೀಗ  ಏರಡನೇ ಹಂತದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ.  ರಷ್ಯಾದಲ್ಲಿ 3 ಲಕ್ಷ ಸೋಂಕಿತರಿದ್ದರೆ 2,972 ಮಂದಿ ಸಾವಿಗೀಡಾಗಿದ್ದಾರೆ. ಸ್ಪೇನ್ ನಲ್ಲಿ 2.79 ಲಕ್ಷ ಸೋಂಕಿದ್ದರೆ 27,888 ಮಂದಿ ಸಾವಿಗೀಡಾಗಿದ್ದಾರೆ. ಬ್ರೆಜಿಲ್ ನಲ್ಲಿ 2.93 ಲಕ್ಷ ಸೋಂಕು. 18,894 ಮಂದಿ ಸಾವು. ಬ್ರಿಟನ್ ನಲ್ಲಿ 2.48 ಲಕ್ಷ ಸೋಂಕು. 35 ಸಾವಿರ ಬಲಿ. ಇಟಲಿಯಲ್ಲಿ 2.27 ಲಕ್ಷ ಸೋಂಕಿತರ ಪೈಕಿ 32 ಸಾವಿರ ಮಂದಿ ಬಲಿಯಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

8 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

23 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

23 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

24 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

24 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

24 hours ago