Advertisement
ಸುದ್ದಿಗಳು

ಕೊರೊನಾ ವೈರಸ್ | ಪರಿಸ್ಥಿತಿ ಹದಗೆಡುತ್ತಿದೆ- ಎಚ್ಚರಿಕೆಯಿಂದ ಇರಲು ವಿಶ್ವ ಆರೋಗ್ಯ ಸಂಸ್ಥೆಯಿಂದ 5 ದೇಶಗಳಿಗೆ ಎಚ್ಚರಿಕೆ

Share

ಕೊರೊನಾ ವೈರಸ್ ಬಗ್ಗೆ ಕೆಲವು ದೇಶಗಳು ಜಾಗರೂಕರಾಗಿರಬೇಕು ಎಂದು  ಎಚ್ಚರಿಕೆ ಸಂದೇಶವನ್ನು  ವಿಶ್ವ ಆರೋಗ್ಯ ಸಂಸ್ಥೆ(WHO)  ನೀಡಿದೆ. ಅಮೇರಿಕಾ ಸೇರಿದಂತೆ 5 ದೇಶಗಳು ಕೊರೊನಾ ಬಗ್ಗೆ ಜಾಗೃತವಾಗಿರಬೇಕು, ತಪ್ಪಿದಲ್ಲಿ  ಅಪಾಯವೂ ಇನ್ನಷ್ಟು ಇದೆ ಎಂದೂ ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ.

ಕೊರೊನಾ ವೈರಸ್ ಹರಡುವಿಕೆ ಕಡಿಮೆಯಾಗಿದೆ ಹೀಗಾಗಿ ಕೊರೊನಾ ವೈರಸ್ ಪ್ರಭಾವ ತಗ್ಗಿಸಿದೆ ಎನ್ನುತ್ತಲೇ ವೈರಸ್ ಹರಡುವ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದ್ದು,  ಕೊರೊನಾ ವೈರಸ್ ಅಧಿಕ ಪ್ರಮಾಣದಲ್ಲಿ ಪಾಸಿಟಿವ್ ಇರುವ ದೇಶಗಳು ಅತೀ ಎಚ್ಚರಿಕೆಯಿಂದ ಇರಬೇಕು ಎಂದು  ಹೇಳಿದೆ. ಈ ಪಟ್ಟಿಯಲ್ಲಿ  ಭಾರತವೂ ಇದೆ.   ಕೊರೊನಾ ವೈರಸ್ ಮೂಲಕ ವಿಶ್ವದ ಪರಿಸ್ಥಿತಿ ಹದಗೆಡುತ್ತಿದೆ. ಕಳೆದ 10 ದಿನಗಳ ದಾಖಲೆಗಳನ್ನು ನೋಡಿದರೆ, ಒಂಬತ್ತನೇ ದಿನದಲ್ಲಿ 1,00,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ, ಈಗೀಗ ಬೆಚ್ಚಿ ಬೀಳಿಸುವ ಅಂಕಿ ಅಂಶಗಳು ಲಭ್ಯವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಹೇಳಿದೆ.

ಪರಿಸ್ಥಿತಿಯನ್ನು ಸುಧಾರಿಸುವುದಾಗಿ ಹೇಳಿಕೊಳ್ಳುತ್ತಿರುವ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು, ಸ್ವಯಂ-ತೃಪ್ತಿ ದೊಡ್ಡ ಅಪಾಯವಾಗಿದೆ ಮತ್ತು ವಿಶ್ವದ ಹೆಚ್ಚಿನ ಜನರು ಇನ್ನೂ ಅಪಾಯದಲ್ಲಿದ್ದಾರೆ. ಸಾಂಕ್ರಾಮಿಕ ರೋಗದಿಂದಲೇ ಭಯಪಡುತ್ತಿರುವುದು ಆರು ತಿಂಗಳಿಗಿಂತಲೂ ಹೆಚ್ಚು ಸಮಯವಾಗಿದೆ ಮತ್ತು ಈಗ ಪರಿಸ್ಥಿತಿಯನ್ನು ಗಮನಿಸಿದರೆ,  ಎಲ್ಲಾ ದೇಶಗಳೂ ಜಾಗೃತವಾಗಿರಬೇಕಿದೆ ಎಂದು ಹೇಳಿದೆ.

ವಿಶ್ವದ ದಾಖಲೆ ಪ್ರಕಾರ ಕೊರೊನಾ ವೈರಸ್  ಜಾಗತಿಕವಾಗಿ 72 ಲಕ್ಷಕ್ಕೂ  ಹೆಚ್ಚು ಜನರಿಗೆ ಸೋಂಕು ತಗುಲಿವೆ.  4 ಲಕ್ಷಕ್ಕೂ ಅಧಿಕ ಜನರು ಸಾಂಕ್ರಾಮಿಕ ರೋಗದಿಂದ ಈವರೆಗೆ ಪ್ರಾಣ ಕಳೆದುಕೊಂಡಿದ್ದಾರೆ.  ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ  ಭಾರತವು 6 ನೇ ಸ್ಥಾನದಲ್ಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

3 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

5 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

14 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

14 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

19 hours ago