Advertisement
ಸುದ್ದಿಗಳು

ಕೊರೊನಾ ವೈರಸ್ | ಪರಿಸ್ಥಿತಿ ಹದಗೆಡುತ್ತಿದೆ- ಎಚ್ಚರಿಕೆಯಿಂದ ಇರಲು ವಿಶ್ವ ಆರೋಗ್ಯ ಸಂಸ್ಥೆಯಿಂದ 5 ದೇಶಗಳಿಗೆ ಎಚ್ಚರಿಕೆ

Share

ಕೊರೊನಾ ವೈರಸ್ ಬಗ್ಗೆ ಕೆಲವು ದೇಶಗಳು ಜಾಗರೂಕರಾಗಿರಬೇಕು ಎಂದು  ಎಚ್ಚರಿಕೆ ಸಂದೇಶವನ್ನು  ವಿಶ್ವ ಆರೋಗ್ಯ ಸಂಸ್ಥೆ(WHO)  ನೀಡಿದೆ. ಅಮೇರಿಕಾ ಸೇರಿದಂತೆ 5 ದೇಶಗಳು ಕೊರೊನಾ ಬಗ್ಗೆ ಜಾಗೃತವಾಗಿರಬೇಕು, ತಪ್ಪಿದಲ್ಲಿ  ಅಪಾಯವೂ ಇನ್ನಷ್ಟು ಇದೆ ಎಂದೂ ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ.

Advertisement
Advertisement

ಕೊರೊನಾ ವೈರಸ್ ಹರಡುವಿಕೆ ಕಡಿಮೆಯಾಗಿದೆ ಹೀಗಾಗಿ ಕೊರೊನಾ ವೈರಸ್ ಪ್ರಭಾವ ತಗ್ಗಿಸಿದೆ ಎನ್ನುತ್ತಲೇ ವೈರಸ್ ಹರಡುವ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದ್ದು,  ಕೊರೊನಾ ವೈರಸ್ ಅಧಿಕ ಪ್ರಮಾಣದಲ್ಲಿ ಪಾಸಿಟಿವ್ ಇರುವ ದೇಶಗಳು ಅತೀ ಎಚ್ಚರಿಕೆಯಿಂದ ಇರಬೇಕು ಎಂದು  ಹೇಳಿದೆ. ಈ ಪಟ್ಟಿಯಲ್ಲಿ  ಭಾರತವೂ ಇದೆ.   ಕೊರೊನಾ ವೈರಸ್ ಮೂಲಕ ವಿಶ್ವದ ಪರಿಸ್ಥಿತಿ ಹದಗೆಡುತ್ತಿದೆ. ಕಳೆದ 10 ದಿನಗಳ ದಾಖಲೆಗಳನ್ನು ನೋಡಿದರೆ, ಒಂಬತ್ತನೇ ದಿನದಲ್ಲಿ 1,00,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ, ಈಗೀಗ ಬೆಚ್ಚಿ ಬೀಳಿಸುವ ಅಂಕಿ ಅಂಶಗಳು ಲಭ್ಯವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಹೇಳಿದೆ.

Advertisement

ಪರಿಸ್ಥಿತಿಯನ್ನು ಸುಧಾರಿಸುವುದಾಗಿ ಹೇಳಿಕೊಳ್ಳುತ್ತಿರುವ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು, ಸ್ವಯಂ-ತೃಪ್ತಿ ದೊಡ್ಡ ಅಪಾಯವಾಗಿದೆ ಮತ್ತು ವಿಶ್ವದ ಹೆಚ್ಚಿನ ಜನರು ಇನ್ನೂ ಅಪಾಯದಲ್ಲಿದ್ದಾರೆ. ಸಾಂಕ್ರಾಮಿಕ ರೋಗದಿಂದಲೇ ಭಯಪಡುತ್ತಿರುವುದು ಆರು ತಿಂಗಳಿಗಿಂತಲೂ ಹೆಚ್ಚು ಸಮಯವಾಗಿದೆ ಮತ್ತು ಈಗ ಪರಿಸ್ಥಿತಿಯನ್ನು ಗಮನಿಸಿದರೆ,  ಎಲ್ಲಾ ದೇಶಗಳೂ ಜಾಗೃತವಾಗಿರಬೇಕಿದೆ ಎಂದು ಹೇಳಿದೆ.

ವಿಶ್ವದ ದಾಖಲೆ ಪ್ರಕಾರ ಕೊರೊನಾ ವೈರಸ್  ಜಾಗತಿಕವಾಗಿ 72 ಲಕ್ಷಕ್ಕೂ  ಹೆಚ್ಚು ಜನರಿಗೆ ಸೋಂಕು ತಗುಲಿವೆ.  4 ಲಕ್ಷಕ್ಕೂ ಅಧಿಕ ಜನರು ಸಾಂಕ್ರಾಮಿಕ ರೋಗದಿಂದ ಈವರೆಗೆ ಪ್ರಾಣ ಕಳೆದುಕೊಂಡಿದ್ದಾರೆ.  ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ  ಭಾರತವು 6 ನೇ ಸ್ಥಾನದಲ್ಲಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

4 mins ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

2 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

2 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

3 hours ago