Advertisement
ಸುದ್ದಿಗಳು

ಕೊರೊನಾ ವೈರಸ್ | ಬುಧವಾರ ದ ಕ ಜಿಲ್ಲೆಯಲ್ಲಿ ಎಲ್ಲಾ ನೆಗೆಟಿವ್ | ಕಾಸರಗೋಡಿನಲ್ಲೂ ನೆಗೆಟಿವ್ | ಇನ್ನೂ ಬೇಕಿದೆ ತೀವ್ರ ನಿಗಾ |

Share

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಬುಧವಾರ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಕೂಡಾ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಈ ಮೂಲಕ ದ.ಕ. ಕನ್ನಡ ಜಿಲ್ಲೆಯ ಜನತೆಯಲ್ಲಿದ್ದ ಆತಂಕ ಕೊಂಚ ದೂರವಾಗಿದೆ. ಆದರೆ ತೀವ್ರ ನಿಗಾ ಇನ್ನೂ ಮುಂದುವರಿಯಲಿದೆ. ಸರಕಾರದ ಆದೇಶ ಪಾಲನೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದಾರೆ.

ಬುಧವಾರದಂದು ಒಟ್ಟು 14 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಇನ್ನು 7 ಮಂದಿಯನ್ನು ನಿಗಾದಲ್ಲಿರಿಸಲಾಗಿದೆ.  ಸುಮಾರು 10 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಎದುರು ನೋಡಲಾಗುತ್ತಿದೆ ಎಂದು ವಿವರಿಸಿದ ಜಿಲ್ಲಾದಿಕಾರಿಗಳು  20 ಮಂದಿ 28 ದಿನಗಳ ಕಾಲದ ಹೋಂ ಕ್ವಾರೆಂಟಿನ್ ಮುಗಿಸಿದ್ದಾರೆ. ಇನ್ನು ಇಂದು ಸುಮಾರು 27 ಮಂದಿ ಇಎಸ್ ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. 2771 ಮಂದಿ ಮನೆಯಲ್ಲೇ ನಿಗಾದಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ ಕೂಡಾ ಬುಧವಾರ ಯಾವುದೇ ಸೋಂಕು ಪತ್ತೆಯಾಗಿಲ್ಲ.ಕಾಸರಗೋಡಿನಲ್ಲಿ ಕಳೆದ ನಾಲ್ಕು ದಿನಗಳ ಅವಧಿಯಲ್ಲಿ 42ರಷ್ಟು ಸೋಂಕಿತರು ಪತ್ತೆಯಾಗಿದ್ದರು. ಇದರಿಂದ ಜನತೆಯಲ್ಲಿ ಭಯದ ವಾತಾವರಣ ಉಂಟಾಗಿತ್ತು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

55 minutes ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

7 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

7 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

21 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago