Exclusive - Mirror Hunt

ಕೊರೊನಾ ವೈರಸ್ | ಲೋಕಹಿತಕ್ಕಾಗಿ ನಡೆಯುತ್ತಿದೆ ಯಜ್ಞಾನುಷ್ಠಾನ | ವೈದ್ಯಕೀಯದ ಜೊತೆ ವೇದ ಸಾರ | ಸರ್ವೇ ಜನಾ: ಸುಖಿನೋ ಭವಂತು

Share

ಸುಳ್ಯ: ನಾಡಿನೆಲ್ಲೆಡೆ ಕರೋನಾ ವೈರಸ್ ಹರಡುವುದನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ. ಸುಳ್ಯ ತಾಲೂಕಿನ ವಿವಿದೆಡೆ ಈ ಯಜ್ಞ ನಡೆಯುತ್ತಿದೆ. ಈ ಮೂಲಕ ಲೋಕ ಹಿತ, ಜನರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯ ನಡೆಯುತ್ತಿದೆ.

ಗುತ್ತಿಗಾರು ಗ್ರಾಮದ ಹಿರಿಯ ವೈದಿಕ ವಿದ್ವಾಂಸರೂ, ಮಾರ್ಗದರ್ಶಕರೂ ಆಗಿರುವ ವೇದಗುರು ಕರುವಜೆ ಕೇಶವ ಜೋಯಿಸರ ನೇತೃತ್ವದಲ್ಲಿ ಮಾ.20 ನೇ ತಾರೀಕಿನಿಂದ ನಿರಂತರವಾಗಿ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ.  ಯಜ್ಞದ ಸಂದರ್ಭ ವೈಜ್ಞಾನಿಕ ರೀತಿಯಲ್ಲಿ ಅಂತರ ಕಾಪಾಡಿಕೊಂಡು ಯಜ್ಞಾನುಷ್ಠಾನ ನಡೆಯತ್ತಿರುವುದು ವಿಶೇಷವಾಗಿದೆ.

ಲೋಕಕ್ಕೆ ಬಾಧಿತವಾದಂತ ಕೋವಿಡ್-19 (ಕರೋನಾ) ವೈರಸ್ ಶೀಘ್ರದಲ್ಲಿ ನಾಶವಾಗುವುದರ ಜೊತೆ ಈ ಸಮರದಲ್ಲಿ ನಿರಂತರ ತೊಡಗಿಸಿಕೊಂಡಿರುವ ಈ ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ವರ್ಗ , ಅಧಿಕಾರಿಗಳು, ವೈದ್ಯಕೀಯ ವಿಭಾಗ , ಆರಕ್ಷಕರು ,ಸೈನ್ಯ , ಹಾಗೂ ದೇಶದ ಸಮಸ್ತ ಪ್ರಜಾಜನರ ಕ್ಷೇಮವನ್ನು ಸಂಕಲ್ಪಿಸಿ ಔಷಧೀಯ ವಸ್ತಗಳು ಹಾಗೂ ವನಸ್ಪತಿಗಳನ್ನು ಯಜ್ಞ ದ ಮೂಲಕ ಭಗವಂತನಿಗೆ ಸಮರ್ಪಿಸಲಾಗಿದೆ.

ಸುಳ್ಯ ಹಾಗೂ ಕಡಬ ತಾಲೂಕಿನ ಹಲವೆಡೆಗಳಲ್ಲಿ ಈ ಕಾರ್ಯ ನಡೆಸಲಾಗಿದ್ದು ಈ ಗುತ್ತಿಗಾರು ಭಾಗದಲ್ಲಿ ಮುರಳೀಕೃಷ್ಣ ವಳಲಂಬೆ ,ಪ್ರಸಾದ ಜೋಷಿ, ಶ್ಯಾಮಕೃಷ್ಣ ಹೊಸವಳಿಕೆ , ಅಚಿಂತ್ಯರಾಮ ಶರ್ಮ, ಕರುವಜೆ ಶಿವಸುಬ್ರಹ್ಮಣ್ಯ ಶರ್ಮಾ ಮೊದಲಾದವರ ನಿರಂತರ ಸಹಕಾರದೊಂದಿಗೆ ಈ ಯಜ್ಞ ಸಂಪನ್ನಗೊಳ್ಳುತ್ತಿದೆ.

ಸಮಾಜದ ಎಲ್ಲ ಮನೆಗಳಲ್ಲಿ ಇಂತಹ ಯಜ್ಞದ ಅನುಷ್ಠಾನ ನಡೆಯಲಿ ಎಂಬ ಸದಾಶಯದೊಂದಿಗೆ ಕೇಶವ ಜೋಯಿಸರು ಈ ಕಾರ್ಯವನ್ನು ನಡೆಸುತ್ತಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

6 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

6 hours ago

ಸ್ತ್ರೀಯರ ಸಬಲೀಕರಣದ ಹೊಸ ಸವಾಲುಗಳು

ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ…

6 hours ago

ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…

15 hours ago

ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…

17 hours ago

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

18 hours ago