ಸುಳ್ಯ: ನಾಡಿನೆಲ್ಲೆಡೆ ಕರೋನಾ ವೈರಸ್ ಹರಡುವುದನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ. ಸುಳ್ಯ ತಾಲೂಕಿನ ವಿವಿದೆಡೆ ಈ ಯಜ್ಞ ನಡೆಯುತ್ತಿದೆ. ಈ ಮೂಲಕ ಲೋಕ ಹಿತ, ಜನರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯ ನಡೆಯುತ್ತಿದೆ.
ಗುತ್ತಿಗಾರು ಗ್ರಾಮದ ಹಿರಿಯ ವೈದಿಕ ವಿದ್ವಾಂಸರೂ, ಮಾರ್ಗದರ್ಶಕರೂ ಆಗಿರುವ ವೇದಗುರು ಕರುವಜೆ ಕೇಶವ ಜೋಯಿಸರ ನೇತೃತ್ವದಲ್ಲಿ ಮಾ.20 ನೇ ತಾರೀಕಿನಿಂದ ನಿರಂತರವಾಗಿ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ. ಯಜ್ಞದ ಸಂದರ್ಭ ವೈಜ್ಞಾನಿಕ ರೀತಿಯಲ್ಲಿ ಅಂತರ ಕಾಪಾಡಿಕೊಂಡು ಯಜ್ಞಾನುಷ್ಠಾನ ನಡೆಯತ್ತಿರುವುದು ವಿಶೇಷವಾಗಿದೆ.
ಲೋಕಕ್ಕೆ ಬಾಧಿತವಾದಂತ ಕೋವಿಡ್-19 (ಕರೋನಾ) ವೈರಸ್ ಶೀಘ್ರದಲ್ಲಿ ನಾಶವಾಗುವುದರ ಜೊತೆ ಈ ಸಮರದಲ್ಲಿ ನಿರಂತರ ತೊಡಗಿಸಿಕೊಂಡಿರುವ ಈ ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ವರ್ಗ , ಅಧಿಕಾರಿಗಳು, ವೈದ್ಯಕೀಯ ವಿಭಾಗ , ಆರಕ್ಷಕರು ,ಸೈನ್ಯ , ಹಾಗೂ ದೇಶದ ಸಮಸ್ತ ಪ್ರಜಾಜನರ ಕ್ಷೇಮವನ್ನು ಸಂಕಲ್ಪಿಸಿ ಔಷಧೀಯ ವಸ್ತಗಳು ಹಾಗೂ ವನಸ್ಪತಿಗಳನ್ನು ಯಜ್ಞ ದ ಮೂಲಕ ಭಗವಂತನಿಗೆ ಸಮರ್ಪಿಸಲಾಗಿದೆ.
ಸುಳ್ಯ ಹಾಗೂ ಕಡಬ ತಾಲೂಕಿನ ಹಲವೆಡೆಗಳಲ್ಲಿ ಈ ಕಾರ್ಯ ನಡೆಸಲಾಗಿದ್ದು ಈ ಗುತ್ತಿಗಾರು ಭಾಗದಲ್ಲಿ ಮುರಳೀಕೃಷ್ಣ ವಳಲಂಬೆ ,ಪ್ರಸಾದ ಜೋಷಿ, ಶ್ಯಾಮಕೃಷ್ಣ ಹೊಸವಳಿಕೆ , ಅಚಿಂತ್ಯರಾಮ ಶರ್ಮ, ಕರುವಜೆ ಶಿವಸುಬ್ರಹ್ಮಣ್ಯ ಶರ್ಮಾ ಮೊದಲಾದವರ ನಿರಂತರ ಸಹಕಾರದೊಂದಿಗೆ ಈ ಯಜ್ಞ ಸಂಪನ್ನಗೊಳ್ಳುತ್ತಿದೆ.
ಸಮಾಜದ ಎಲ್ಲ ಮನೆಗಳಲ್ಲಿ ಇಂತಹ ಯಜ್ಞದ ಅನುಷ್ಠಾನ ನಡೆಯಲಿ ಎಂಬ ಸದಾಶಯದೊಂದಿಗೆ ಕೇಶವ ಜೋಯಿಸರು ಈ ಕಾರ್ಯವನ್ನು ನಡೆಸುತ್ತಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…