Advertisement
Exclusive - Mirror Hunt

ಕೊರೊನಾ ವೈರಸ್ | ಲೋಕಹಿತಕ್ಕಾಗಿ ನಡೆಯುತ್ತಿದೆ ಯಜ್ಞಾನುಷ್ಠಾನ | ವೈದ್ಯಕೀಯದ ಜೊತೆ ವೇದ ಸಾರ | ಸರ್ವೇ ಜನಾ: ಸುಖಿನೋ ಭವಂತು

Share

ಸುಳ್ಯ: ನಾಡಿನೆಲ್ಲೆಡೆ ಕರೋನಾ ವೈರಸ್ ಹರಡುವುದನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ. ಸುಳ್ಯ ತಾಲೂಕಿನ ವಿವಿದೆಡೆ ಈ ಯಜ್ಞ ನಡೆಯುತ್ತಿದೆ. ಈ ಮೂಲಕ ಲೋಕ ಹಿತ, ಜನರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯ ನಡೆಯುತ್ತಿದೆ.

ಗುತ್ತಿಗಾರು ಗ್ರಾಮದ ಹಿರಿಯ ವೈದಿಕ ವಿದ್ವಾಂಸರೂ, ಮಾರ್ಗದರ್ಶಕರೂ ಆಗಿರುವ ವೇದಗುರು ಕರುವಜೆ ಕೇಶವ ಜೋಯಿಸರ ನೇತೃತ್ವದಲ್ಲಿ ಮಾ.20 ನೇ ತಾರೀಕಿನಿಂದ ನಿರಂತರವಾಗಿ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ.  ಯಜ್ಞದ ಸಂದರ್ಭ ವೈಜ್ಞಾನಿಕ ರೀತಿಯಲ್ಲಿ ಅಂತರ ಕಾಪಾಡಿಕೊಂಡು ಯಜ್ಞಾನುಷ್ಠಾನ ನಡೆಯತ್ತಿರುವುದು ವಿಶೇಷವಾಗಿದೆ.

ಲೋಕಕ್ಕೆ ಬಾಧಿತವಾದಂತ ಕೋವಿಡ್-19 (ಕರೋನಾ) ವೈರಸ್ ಶೀಘ್ರದಲ್ಲಿ ನಾಶವಾಗುವುದರ ಜೊತೆ ಈ ಸಮರದಲ್ಲಿ ನಿರಂತರ ತೊಡಗಿಸಿಕೊಂಡಿರುವ ಈ ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ವರ್ಗ , ಅಧಿಕಾರಿಗಳು, ವೈದ್ಯಕೀಯ ವಿಭಾಗ , ಆರಕ್ಷಕರು ,ಸೈನ್ಯ , ಹಾಗೂ ದೇಶದ ಸಮಸ್ತ ಪ್ರಜಾಜನರ ಕ್ಷೇಮವನ್ನು ಸಂಕಲ್ಪಿಸಿ ಔಷಧೀಯ ವಸ್ತಗಳು ಹಾಗೂ ವನಸ್ಪತಿಗಳನ್ನು ಯಜ್ಞ ದ ಮೂಲಕ ಭಗವಂತನಿಗೆ ಸಮರ್ಪಿಸಲಾಗಿದೆ.

ಸುಳ್ಯ ಹಾಗೂ ಕಡಬ ತಾಲೂಕಿನ ಹಲವೆಡೆಗಳಲ್ಲಿ ಈ ಕಾರ್ಯ ನಡೆಸಲಾಗಿದ್ದು ಈ ಗುತ್ತಿಗಾರು ಭಾಗದಲ್ಲಿ ಮುರಳೀಕೃಷ್ಣ ವಳಲಂಬೆ ,ಪ್ರಸಾದ ಜೋಷಿ, ಶ್ಯಾಮಕೃಷ್ಣ ಹೊಸವಳಿಕೆ , ಅಚಿಂತ್ಯರಾಮ ಶರ್ಮ, ಕರುವಜೆ ಶಿವಸುಬ್ರಹ್ಮಣ್ಯ ಶರ್ಮಾ ಮೊದಲಾದವರ ನಿರಂತರ ಸಹಕಾರದೊಂದಿಗೆ ಈ ಯಜ್ಞ ಸಂಪನ್ನಗೊಳ್ಳುತ್ತಿದೆ.

ಸಮಾಜದ ಎಲ್ಲ ಮನೆಗಳಲ್ಲಿ ಇಂತಹ ಯಜ್ಞದ ಅನುಷ್ಠಾನ ನಡೆಯಲಿ ಎಂಬ ಸದಾಶಯದೊಂದಿಗೆ ಕೇಶವ ಜೋಯಿಸರು ಈ ಕಾರ್ಯವನ್ನು ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago