Advertisement
Exclusive - Mirror Hunt

ಕೊರೊನಾ ವೈರಸ್ | ಲೋಕಹಿತಕ್ಕಾಗಿ ನಡೆಯುತ್ತಿದೆ ಯಜ್ಞಾನುಷ್ಠಾನ | ವೈದ್ಯಕೀಯದ ಜೊತೆ ವೇದ ಸಾರ | ಸರ್ವೇ ಜನಾ: ಸುಖಿನೋ ಭವಂತು

Share

ಸುಳ್ಯ: ನಾಡಿನೆಲ್ಲೆಡೆ ಕರೋನಾ ವೈರಸ್ ಹರಡುವುದನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ. ಸುಳ್ಯ ತಾಲೂಕಿನ ವಿವಿದೆಡೆ ಈ ಯಜ್ಞ ನಡೆಯುತ್ತಿದೆ. ಈ ಮೂಲಕ ಲೋಕ ಹಿತ, ಜನರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯ ನಡೆಯುತ್ತಿದೆ.

ಗುತ್ತಿಗಾರು ಗ್ರಾಮದ ಹಿರಿಯ ವೈದಿಕ ವಿದ್ವಾಂಸರೂ, ಮಾರ್ಗದರ್ಶಕರೂ ಆಗಿರುವ ವೇದಗುರು ಕರುವಜೆ ಕೇಶವ ಜೋಯಿಸರ ನೇತೃತ್ವದಲ್ಲಿ ಮಾ.20 ನೇ ತಾರೀಕಿನಿಂದ ನಿರಂತರವಾಗಿ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ.  ಯಜ್ಞದ ಸಂದರ್ಭ ವೈಜ್ಞಾನಿಕ ರೀತಿಯಲ್ಲಿ ಅಂತರ ಕಾಪಾಡಿಕೊಂಡು ಯಜ್ಞಾನುಷ್ಠಾನ ನಡೆಯತ್ತಿರುವುದು ವಿಶೇಷವಾಗಿದೆ.

ಲೋಕಕ್ಕೆ ಬಾಧಿತವಾದಂತ ಕೋವಿಡ್-19 (ಕರೋನಾ) ವೈರಸ್ ಶೀಘ್ರದಲ್ಲಿ ನಾಶವಾಗುವುದರ ಜೊತೆ ಈ ಸಮರದಲ್ಲಿ ನಿರಂತರ ತೊಡಗಿಸಿಕೊಂಡಿರುವ ಈ ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ವರ್ಗ , ಅಧಿಕಾರಿಗಳು, ವೈದ್ಯಕೀಯ ವಿಭಾಗ , ಆರಕ್ಷಕರು ,ಸೈನ್ಯ , ಹಾಗೂ ದೇಶದ ಸಮಸ್ತ ಪ್ರಜಾಜನರ ಕ್ಷೇಮವನ್ನು ಸಂಕಲ್ಪಿಸಿ ಔಷಧೀಯ ವಸ್ತಗಳು ಹಾಗೂ ವನಸ್ಪತಿಗಳನ್ನು ಯಜ್ಞ ದ ಮೂಲಕ ಭಗವಂತನಿಗೆ ಸಮರ್ಪಿಸಲಾಗಿದೆ.

ಸುಳ್ಯ ಹಾಗೂ ಕಡಬ ತಾಲೂಕಿನ ಹಲವೆಡೆಗಳಲ್ಲಿ ಈ ಕಾರ್ಯ ನಡೆಸಲಾಗಿದ್ದು ಈ ಗುತ್ತಿಗಾರು ಭಾಗದಲ್ಲಿ ಮುರಳೀಕೃಷ್ಣ ವಳಲಂಬೆ ,ಪ್ರಸಾದ ಜೋಷಿ, ಶ್ಯಾಮಕೃಷ್ಣ ಹೊಸವಳಿಕೆ , ಅಚಿಂತ್ಯರಾಮ ಶರ್ಮ, ಕರುವಜೆ ಶಿವಸುಬ್ರಹ್ಮಣ್ಯ ಶರ್ಮಾ ಮೊದಲಾದವರ ನಿರಂತರ ಸಹಕಾರದೊಂದಿಗೆ ಈ ಯಜ್ಞ ಸಂಪನ್ನಗೊಳ್ಳುತ್ತಿದೆ.

ಸಮಾಜದ ಎಲ್ಲ ಮನೆಗಳಲ್ಲಿ ಇಂತಹ ಯಜ್ಞದ ಅನುಷ್ಠಾನ ನಡೆಯಲಿ ಎಂಬ ಸದಾಶಯದೊಂದಿಗೆ ಕೇಶವ ಜೋಯಿಸರು ಈ ಕಾರ್ಯವನ್ನು ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

4 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

9 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

21 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago