ಸುಳ್ಯ: ನಾಡಿನೆಲ್ಲೆಡೆ ಕರೋನಾ ವೈರಸ್ ಹರಡುವುದನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ. ಸುಳ್ಯ ತಾಲೂಕಿನ ವಿವಿದೆಡೆ ಈ ಯಜ್ಞ ನಡೆಯುತ್ತಿದೆ. ಈ ಮೂಲಕ ಲೋಕ ಹಿತ, ಜನರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯ ನಡೆಯುತ್ತಿದೆ.
ಗುತ್ತಿಗಾರು ಗ್ರಾಮದ ಹಿರಿಯ ವೈದಿಕ ವಿದ್ವಾಂಸರೂ, ಮಾರ್ಗದರ್ಶಕರೂ ಆಗಿರುವ ವೇದಗುರು ಕರುವಜೆ ಕೇಶವ ಜೋಯಿಸರ ನೇತೃತ್ವದಲ್ಲಿ ಮಾ.20 ನೇ ತಾರೀಕಿನಿಂದ ನಿರಂತರವಾಗಿ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ. ಯಜ್ಞದ ಸಂದರ್ಭ ವೈಜ್ಞಾನಿಕ ರೀತಿಯಲ್ಲಿ ಅಂತರ ಕಾಪಾಡಿಕೊಂಡು ಯಜ್ಞಾನುಷ್ಠಾನ ನಡೆಯತ್ತಿರುವುದು ವಿಶೇಷವಾಗಿದೆ.
ಲೋಕಕ್ಕೆ ಬಾಧಿತವಾದಂತ ಕೋವಿಡ್-19 (ಕರೋನಾ) ವೈರಸ್ ಶೀಘ್ರದಲ್ಲಿ ನಾಶವಾಗುವುದರ ಜೊತೆ ಈ ಸಮರದಲ್ಲಿ ನಿರಂತರ ತೊಡಗಿಸಿಕೊಂಡಿರುವ ಈ ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ವರ್ಗ , ಅಧಿಕಾರಿಗಳು, ವೈದ್ಯಕೀಯ ವಿಭಾಗ , ಆರಕ್ಷಕರು ,ಸೈನ್ಯ , ಹಾಗೂ ದೇಶದ ಸಮಸ್ತ ಪ್ರಜಾಜನರ ಕ್ಷೇಮವನ್ನು ಸಂಕಲ್ಪಿಸಿ ಔಷಧೀಯ ವಸ್ತಗಳು ಹಾಗೂ ವನಸ್ಪತಿಗಳನ್ನು ಯಜ್ಞ ದ ಮೂಲಕ ಭಗವಂತನಿಗೆ ಸಮರ್ಪಿಸಲಾಗಿದೆ.
ಸುಳ್ಯ ಹಾಗೂ ಕಡಬ ತಾಲೂಕಿನ ಹಲವೆಡೆಗಳಲ್ಲಿ ಈ ಕಾರ್ಯ ನಡೆಸಲಾಗಿದ್ದು ಈ ಗುತ್ತಿಗಾರು ಭಾಗದಲ್ಲಿ ಮುರಳೀಕೃಷ್ಣ ವಳಲಂಬೆ ,ಪ್ರಸಾದ ಜೋಷಿ, ಶ್ಯಾಮಕೃಷ್ಣ ಹೊಸವಳಿಕೆ , ಅಚಿಂತ್ಯರಾಮ ಶರ್ಮ, ಕರುವಜೆ ಶಿವಸುಬ್ರಹ್ಮಣ್ಯ ಶರ್ಮಾ ಮೊದಲಾದವರ ನಿರಂತರ ಸಹಕಾರದೊಂದಿಗೆ ಈ ಯಜ್ಞ ಸಂಪನ್ನಗೊಳ್ಳುತ್ತಿದೆ.
ಸಮಾಜದ ಎಲ್ಲ ಮನೆಗಳಲ್ಲಿ ಇಂತಹ ಯಜ್ಞದ ಅನುಷ್ಠಾನ ನಡೆಯಲಿ ಎಂಬ ಸದಾಶಯದೊಂದಿಗೆ ಕೇಶವ ಜೋಯಿಸರು ಈ ಕಾರ್ಯವನ್ನು ನಡೆಸುತ್ತಿದ್ದಾರೆ.
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…