Advertisement
ಸುದ್ದಿಗಳು

ಕೊರೊನಾ ವೈರಸ್ | ಸುಳ್ಯದ ಸ್ಥಿತಿ ಹೀಗಿದೆ | ಅಗತ್ಯ ಸೇವೆ ಇದೆ | ದಿನಸಿ ಅಂಗಡಿ ಸ್ವಲ್ಪ ಹೊತ್ತು ಬೇಕಿದೆ | ಜನಸಂದಣಿಗೆ ಕಡಿವಾಣ ಬೇಕಿದೆ

Share

ಸುಳ್ಯ: ಕರೋನ್ ವೈರಸ್ ಹರಡುವುದನ್ನು  ತಡೆಯಲು ಸರಕಾರ ಹಲವು ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಅದರ ಭಾಗವಾಗಿ ಮಾ.31 ರವರೆಗೆ ಬಂದ್ ಆಚರಣೆ ಮಾಡಲಾಗುತ್ತಿದೆ. ಪೆಟ್ರೋಲ್, ಮೆಡಿಕಲ್, ಹಾಲು ಸೇರಿದಂತೆ ಅಗತ್ಯ ಸೇವೆಗಳು ಇರಲಿದೆ. ಆದರೆ ಹಾಲು ಬೆಳಗ್ಗೆ ಮಾತ್ರವೇ ಲಭ್ಯ ಇರುತ್ತದೆ.  ಸುಳ್ಯದಲ್ಲಿ  ಕೂಡಾ ಇದೇ ನಿಯಮ ಪಾಲನೆಯಾಗುತ್ತಿದೆ.

Advertisement
Advertisement
Advertisement
Advertisement

ದಿನಸಿ ಅಂಗಡಿ ತರಕಾರಿ ಅಂಗಡಿ ಮಧ್ಯಾಹ್ನದವರೆಗೆ ತೆರೆಯಬಹುದು  ಎಂಬ ಸೂಚನೆ ಇದ್ದರೂ ಗೊಂದಲಗಳಿಂದ ಅಂಗಡಿ ಬಾಗಿಲು ತೆರೆದಿಲ್ಲ. ಗ್ರಾಮೀಣ ಭಾಗದಲ್ಲೂ ಇದೇ ಗೊಂದಲ ಇದೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೂ ಗೊಂದಲ.

Advertisement

ಪೇಟೆಯಲ್ಲಿ ಅನಗತ್ಯವಾಗಿ ತಿರುಗಾಡುವುದು  ಹಾಗೂ ಅಂಗಡಿಗಳಲ್ಲಿ  ಜನಸಂದಣಿ ಸೇರುವುದು ಕಂಡುಬರುತ್ತಿದೆ. ಹೀಗಾಗಿ ಬಂದ್ ಮಾಡುವುದು  ಅನಿವಾರ್ಯವಾಗಿದೆ. ಜನರೇ ಸ್ವಯಂ ನಿಯಂತ್ರಣ ಮಾಡಿಕೊಂಡು ಕನಿಷ್ಟ ಅಂತರ ಕಾಪಾಡಿಕೊಂಡರೆ ಈ ಸಮಸ್ಯೆ ಉಲ್ಬಣಿಸದು. ಆದರೆ ಕೊರೊನಾ ವೈರಸ್ ಹರಡುವುದು ತಡೆಗೆ ಅಗತ್ಯವಾಗಿ ಆಡಳಿತದ ಜೊತೆ ಕೈಜೋಡಿಸಬೇಕಿದೆ.

ಮನೆಯಿಂದ ಹೊರಬರಬೇಡಿ – ದಿನಸಿ ಖರೀದಿಗೆ ಅವಕಾಶ ಇದೆ  : ತಹಶೀಲ್ದಾರ್ ಮನವಿ 

Advertisement

ಕೊರೊನಾ ವೈರಸ್ ಹರಡುವುದು  ತಡೆಗೆ ಜನರು ಜಾಗೃತರಾಗಿ ಮಾ.31 ರವರೆಗೆ ತುರ್ತು ಅವಶ್ಯಕತೆ ಹೊರತುಪಡಿಸಿ  ಸಾಧ್ಯವಾದಷ್ಟು ಮನೆಯಿಂದ ಹೊರಬರಬೇಡಿ ಎಂದು ತಹಶೀಲ್ದಾರ್ ಅನಂತ ಶಂಕರ್ ಮನವಿ ಮಾಡಿದ್ದಾರೆ. ದಿನಸಿ ಖರೀದಿಗೆ ಅವಕಾಶ ಇದೆ. ಯಾವುದೇ ಜನರು ಆತಂಕಕ್ಕೆ ಒಳಗಾಗಬೇಕಾಗಿಲ್ಲ. ದಾಸ್ತಾನು ಖಾಲಿಯಾದರೆ ವರ್ತಕರು ತರಿಸಿಕೊಳ್ಳಬಹುದು. ಬೆಳಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ದಿನಸಿ ಅಂಗಡಿಗಳು ತೆರಯಬಹುದು ಎಂದು ಅನಂತ ಶಂಕರ್ ಹೇಳಿದ್ದಾರೆ. ಆದರೆ ಜನ ಸಂದಣಿ ಕಡಿಮೆ ಮಾಡಬೇಕು , ಎಲ್ಲೂ ಸೇರಬಾರದು ಎಂದು ತಿಳಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಬಂದ್… ಬಂದ್…

Advertisement

ಕೊರೊನಾ ವೈರಸ್ ಹರಡುವುದು  ತಡೆಗೆ ಗ್ರಾಮಿಣ ಭಾಗದ ಜನರು ಉತ್ತಮ ರೀತಿಯಲ್ಲಿ ಸ್ಪಂದನೆ ನೀಡಿದ್ದಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಗ್ರಾಮೀಣ ಭಾಗಗಳೂ ಬಂದ್ ಆಗಿವೆ. ತುರ್ತಾಗಿ ದಿನಸಿ ಅಂಗಡಿಗಳಿಗೆ ತೆರಳುವುದೇ ಈಗ ಗ್ರಾಮೀಣ ಭಾಗದ ಜನರಿಗೆ ತಲೆ ನೋವಾಗಿದೆ.

ಮಾ.31 ರವೆರೆಗ ನಿಗದಿ ಪಡಿಸಿದ ಸಮಯದಲ್ಲಿ  ದಿನಸಿ ಖರೀದಿಗೆ ಅವಕಾಶ ಇದೆ:

Advertisement

 ಮಾ.31 ರವರೆಗೆ ನಿಗದಿ ಪಡಿಸಿದ ಸಮಯದಲ್ಲಿ  ದಿನಸಿ, ಹಾಲು , ತರಕಾರಿ ಖರೀದಿಗೆ ಅವಕಾಶ ಇದೆ. ಈ ಸಮಯ ಹೊರತುಪಡಿಸಿ ಉಳಿದ ಸಮಯದಲ್ಲಿ ಅನಗತ್ಯ ತಿರುಗಾಟ ಕಂಡುಬಂದರೆ ಕೇಸು ದಾಖಲಿಸಲಾಗುವುದು  ಎಂದು ಸಿಐ ನವೀನ್ ಚಂದ್ರ ಜೋಗಿ ಎಚ್ಚರಿಸಿದ್ದಾರೆ.

ಬೆಳ್ಳಾರೆಯಲ್ಲಿ  ಲಾಠಿ ಬೀಸಿದ ಪೊಲೀಸರು :

Advertisement

ಬೆಳ್ಳಾರೆಯಲ್ಲಿ  ಪೇಟೆಯಲ್ಲಿ ಅನಗತ್ಯವಾಗಿ ಓಡಾಟ ಮಾಡುತ್ತಿದ್ದವರನ್ನು  ಪೊಲೀಸರು ಲಾಠಿ ಬೀಸಿ ಓಡಿಸಿದ್ದಾರೆ. ಮಾ.31 ರವರೆಗೆ ಈ ಕ್ರಮಗಳು ಅನಿವಾರ್ಯವಾಗಿದೆ. ಇದೀಗ ಠಾಣಾ ವ್ಯಾಪ್ತಿಯಲ್ಲಿ  ಧ್ವನಿ ವರ್ಧಕದ ಮೂಲಕ ಮಾಹಿತಿ ತಿಳಿಸಲಾಗುತ್ತಿದೆ.

ಜಿಲ್ಲಾ ಗಡಿಭಾಗದಲ್ಲಿ ತಪಾಸಣೆ:

Advertisement

ಕೊರೊನಾ ವೈರಸ್ ಕೊಡಗು ಹಾಗೂ ಕಾಸರಗೋಡು ಕಡೆಯಲ್ಲಿ  ಹರಡಿರುವ ಕಾರಣದಿಂದ ಬೇರೆ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿಯೇ ಬಿಡಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

3 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

6 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

19 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

19 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

20 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

20 hours ago