Advertisement
ಸುದ್ದಿಗಳು

ಕೊರೊನಾ ವೈರಸ್ | ಸುಳ್ಯದ ಸ್ಥಿತಿ ಹೀಗಿದೆ | ಅಗತ್ಯ ಸೇವೆ ಇದೆ | ದಿನಸಿ ಅಂಗಡಿ ಸ್ವಲ್ಪ ಹೊತ್ತು ಬೇಕಿದೆ | ಜನಸಂದಣಿಗೆ ಕಡಿವಾಣ ಬೇಕಿದೆ

Share

ಸುಳ್ಯ: ಕರೋನ್ ವೈರಸ್ ಹರಡುವುದನ್ನು  ತಡೆಯಲು ಸರಕಾರ ಹಲವು ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಅದರ ಭಾಗವಾಗಿ ಮಾ.31 ರವರೆಗೆ ಬಂದ್ ಆಚರಣೆ ಮಾಡಲಾಗುತ್ತಿದೆ. ಪೆಟ್ರೋಲ್, ಮೆಡಿಕಲ್, ಹಾಲು ಸೇರಿದಂತೆ ಅಗತ್ಯ ಸೇವೆಗಳು ಇರಲಿದೆ. ಆದರೆ ಹಾಲು ಬೆಳಗ್ಗೆ ಮಾತ್ರವೇ ಲಭ್ಯ ಇರುತ್ತದೆ.  ಸುಳ್ಯದಲ್ಲಿ  ಕೂಡಾ ಇದೇ ನಿಯಮ ಪಾಲನೆಯಾಗುತ್ತಿದೆ.

ದಿನಸಿ ಅಂಗಡಿ ತರಕಾರಿ ಅಂಗಡಿ ಮಧ್ಯಾಹ್ನದವರೆಗೆ ತೆರೆಯಬಹುದು  ಎಂಬ ಸೂಚನೆ ಇದ್ದರೂ ಗೊಂದಲಗಳಿಂದ ಅಂಗಡಿ ಬಾಗಿಲು ತೆರೆದಿಲ್ಲ. ಗ್ರಾಮೀಣ ಭಾಗದಲ್ಲೂ ಇದೇ ಗೊಂದಲ ಇದೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೂ ಗೊಂದಲ.

ಪೇಟೆಯಲ್ಲಿ ಅನಗತ್ಯವಾಗಿ ತಿರುಗಾಡುವುದು  ಹಾಗೂ ಅಂಗಡಿಗಳಲ್ಲಿ  ಜನಸಂದಣಿ ಸೇರುವುದು ಕಂಡುಬರುತ್ತಿದೆ. ಹೀಗಾಗಿ ಬಂದ್ ಮಾಡುವುದು  ಅನಿವಾರ್ಯವಾಗಿದೆ. ಜನರೇ ಸ್ವಯಂ ನಿಯಂತ್ರಣ ಮಾಡಿಕೊಂಡು ಕನಿಷ್ಟ ಅಂತರ ಕಾಪಾಡಿಕೊಂಡರೆ ಈ ಸಮಸ್ಯೆ ಉಲ್ಬಣಿಸದು. ಆದರೆ ಕೊರೊನಾ ವೈರಸ್ ಹರಡುವುದು ತಡೆಗೆ ಅಗತ್ಯವಾಗಿ ಆಡಳಿತದ ಜೊತೆ ಕೈಜೋಡಿಸಬೇಕಿದೆ.

ಮನೆಯಿಂದ ಹೊರಬರಬೇಡಿ – ದಿನಸಿ ಖರೀದಿಗೆ ಅವಕಾಶ ಇದೆ  : ತಹಶೀಲ್ದಾರ್ ಮನವಿ 

ಕೊರೊನಾ ವೈರಸ್ ಹರಡುವುದು  ತಡೆಗೆ ಜನರು ಜಾಗೃತರಾಗಿ ಮಾ.31 ರವರೆಗೆ ತುರ್ತು ಅವಶ್ಯಕತೆ ಹೊರತುಪಡಿಸಿ  ಸಾಧ್ಯವಾದಷ್ಟು ಮನೆಯಿಂದ ಹೊರಬರಬೇಡಿ ಎಂದು ತಹಶೀಲ್ದಾರ್ ಅನಂತ ಶಂಕರ್ ಮನವಿ ಮಾಡಿದ್ದಾರೆ. ದಿನಸಿ ಖರೀದಿಗೆ ಅವಕಾಶ ಇದೆ. ಯಾವುದೇ ಜನರು ಆತಂಕಕ್ಕೆ ಒಳಗಾಗಬೇಕಾಗಿಲ್ಲ. ದಾಸ್ತಾನು ಖಾಲಿಯಾದರೆ ವರ್ತಕರು ತರಿಸಿಕೊಳ್ಳಬಹುದು. ಬೆಳಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ದಿನಸಿ ಅಂಗಡಿಗಳು ತೆರಯಬಹುದು ಎಂದು ಅನಂತ ಶಂಕರ್ ಹೇಳಿದ್ದಾರೆ. ಆದರೆ ಜನ ಸಂದಣಿ ಕಡಿಮೆ ಮಾಡಬೇಕು , ಎಲ್ಲೂ ಸೇರಬಾರದು ಎಂದು ತಿಳಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಬಂದ್… ಬಂದ್…

ಕೊರೊನಾ ವೈರಸ್ ಹರಡುವುದು  ತಡೆಗೆ ಗ್ರಾಮಿಣ ಭಾಗದ ಜನರು ಉತ್ತಮ ರೀತಿಯಲ್ಲಿ ಸ್ಪಂದನೆ ನೀಡಿದ್ದಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಗ್ರಾಮೀಣ ಭಾಗಗಳೂ ಬಂದ್ ಆಗಿವೆ. ತುರ್ತಾಗಿ ದಿನಸಿ ಅಂಗಡಿಗಳಿಗೆ ತೆರಳುವುದೇ ಈಗ ಗ್ರಾಮೀಣ ಭಾಗದ ಜನರಿಗೆ ತಲೆ ನೋವಾಗಿದೆ.

ಮಾ.31 ರವೆರೆಗ ನಿಗದಿ ಪಡಿಸಿದ ಸಮಯದಲ್ಲಿ  ದಿನಸಿ ಖರೀದಿಗೆ ಅವಕಾಶ ಇದೆ:

 ಮಾ.31 ರವರೆಗೆ ನಿಗದಿ ಪಡಿಸಿದ ಸಮಯದಲ್ಲಿ  ದಿನಸಿ, ಹಾಲು , ತರಕಾರಿ ಖರೀದಿಗೆ ಅವಕಾಶ ಇದೆ. ಈ ಸಮಯ ಹೊರತುಪಡಿಸಿ ಉಳಿದ ಸಮಯದಲ್ಲಿ ಅನಗತ್ಯ ತಿರುಗಾಟ ಕಂಡುಬಂದರೆ ಕೇಸು ದಾಖಲಿಸಲಾಗುವುದು  ಎಂದು ಸಿಐ ನವೀನ್ ಚಂದ್ರ ಜೋಗಿ ಎಚ್ಚರಿಸಿದ್ದಾರೆ.

ಬೆಳ್ಳಾರೆಯಲ್ಲಿ  ಲಾಠಿ ಬೀಸಿದ ಪೊಲೀಸರು :

ಬೆಳ್ಳಾರೆಯಲ್ಲಿ  ಪೇಟೆಯಲ್ಲಿ ಅನಗತ್ಯವಾಗಿ ಓಡಾಟ ಮಾಡುತ್ತಿದ್ದವರನ್ನು  ಪೊಲೀಸರು ಲಾಠಿ ಬೀಸಿ ಓಡಿಸಿದ್ದಾರೆ. ಮಾ.31 ರವರೆಗೆ ಈ ಕ್ರಮಗಳು ಅನಿವಾರ್ಯವಾಗಿದೆ. ಇದೀಗ ಠಾಣಾ ವ್ಯಾಪ್ತಿಯಲ್ಲಿ  ಧ್ವನಿ ವರ್ಧಕದ ಮೂಲಕ ಮಾಹಿತಿ ತಿಳಿಸಲಾಗುತ್ತಿದೆ.

ಜಿಲ್ಲಾ ಗಡಿಭಾಗದಲ್ಲಿ ತಪಾಸಣೆ:

ಕೊರೊನಾ ವೈರಸ್ ಕೊಡಗು ಹಾಗೂ ಕಾಸರಗೋಡು ಕಡೆಯಲ್ಲಿ  ಹರಡಿರುವ ಕಾರಣದಿಂದ ಬೇರೆ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿಯೇ ಬಿಡಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

20 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago