Advertisement
ಸುದ್ದಿಗಳು

ಕೊರೊನಾ ವೈರಸ್ ಸೋಂಕು – ಇಟಲಿಯಲ್ಲಿ 4032 ಮಂದಿ ಸಾವು | ಕೊರೊನಾ ನಿರ್ಲಕ್ಷ್ಯದಿಂದ ಇಟಲಿ ತತ್ತರ | ವೈರಸ್ ಹರಡುವುದು ನಿಯಂತ್ರಿಸಲಾಗದೆ ಕೈಚೆಲ್ಲಿದ ಇಟಲಿ ಆಡಳಿತ

Share

ಇಟಲಿ : ಕೊರೊನಾ ವೈರಸ್ ಗೆ ಇಟಲಿಯಲ್ಲಿ ಇದುವರೆಗೆ 4032 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಒಂದೇ ದಿನ 630 ಮಂದಿ ಸಾವನ್ನಪ್ಪಿದರೆ ಇಂದೂ ಸಾವಿನ ಸಂಖ್ಯೆ ಮುಂದುವರಿದಿದೆ.  ಈಗ ಇಟಲಿ ಕೊರೊನಾ ವೈರಸ್ ಗೆ ನಲುಗಿ ಹೋಗಿದ್ದು , ವೈರಸ್ ಹರಡುವುದು ತಡೆಗೆ ಸರಕಾರ ಕೈಗೊಂಡ ಕ್ರಮಗಳು ವೈಫಲ್ಯವಾಗಿ ಸರಕಾರವೇ ಕೈಚೆಲ್ಲಿದೆ. ಒಂದು ವಾರದಿಂದ ಜನರ ನಿರ್ಲಕ್ಷ್ಯವೇ ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ.

ಇಟಲಿಯ ಲೊಂಬಾರ್ಡಿ ನಗರದಲ್ಲಿ ಮೊದಲು ಕೊರೊನಾ ಕಾಣಿಸಿಕೊಂಡಿತ್ತು. ನಂತರ ಈ ನಗರದಲ್ಲಿ ಕೊರೋನಾ ವೈರಸ್​ ಪೀಡಿತರ ಸಂಖ್ಯೆ ಹೆಚ್ಚಿತು. ಇಂದು ಇಟಲಿಯಲ್ಲಿ 47021 ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 4032 ಮಂದಿ ಸಾವನ್ನಪ್ಪಿದ್ದಾರೆ. 5129 ಮಂದಿ ಗುಣಮುಖರಾಗುತ್ತಿದ್ದಾರೆ. 2655 ಮಂದಿ ತುರ್ತುನಿಗಾದಲ್ಲಿದ್ದಾರೆ. ಮಾ.16 ರ ನಂತರ ಸಾವಿನ ಸಂಖ್ಯೆ ಹೆಚ್ಚುತ್ತಿದೆ.  ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ.

ಆರಂಭದಲ್ಲಿ  ಬಂದ್ ಗೆ ಕರೆ ನೀಡಿದ್ದರೂ  ಜನರು  ಸುತ್ತಾಡಿಕೊಂಡಿದ್ದಾರೆ. ಹೀಗಾಗಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

( Source :ಸುದ್ದಿ ಸಂಸ್ಥೆಗಳು )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

1 hour ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

6 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

9 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

9 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

23 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

1 day ago