Advertisement
ಸುದ್ದಿಗಳು

ಕೊರೊನಾ ವೈರಸ್ ಸೋಂಕು – ಇಟಲಿಯಲ್ಲಿ 4032 ಮಂದಿ ಸಾವು | ಕೊರೊನಾ ನಿರ್ಲಕ್ಷ್ಯದಿಂದ ಇಟಲಿ ತತ್ತರ | ವೈರಸ್ ಹರಡುವುದು ನಿಯಂತ್ರಿಸಲಾಗದೆ ಕೈಚೆಲ್ಲಿದ ಇಟಲಿ ಆಡಳಿತ

Share

ಇಟಲಿ : ಕೊರೊನಾ ವೈರಸ್ ಗೆ ಇಟಲಿಯಲ್ಲಿ ಇದುವರೆಗೆ 4032 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಒಂದೇ ದಿನ 630 ಮಂದಿ ಸಾವನ್ನಪ್ಪಿದರೆ ಇಂದೂ ಸಾವಿನ ಸಂಖ್ಯೆ ಮುಂದುವರಿದಿದೆ.  ಈಗ ಇಟಲಿ ಕೊರೊನಾ ವೈರಸ್ ಗೆ ನಲುಗಿ ಹೋಗಿದ್ದು , ವೈರಸ್ ಹರಡುವುದು ತಡೆಗೆ ಸರಕಾರ ಕೈಗೊಂಡ ಕ್ರಮಗಳು ವೈಫಲ್ಯವಾಗಿ ಸರಕಾರವೇ ಕೈಚೆಲ್ಲಿದೆ. ಒಂದು ವಾರದಿಂದ ಜನರ ನಿರ್ಲಕ್ಷ್ಯವೇ ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ.

ಇಟಲಿಯ ಲೊಂಬಾರ್ಡಿ ನಗರದಲ್ಲಿ ಮೊದಲು ಕೊರೊನಾ ಕಾಣಿಸಿಕೊಂಡಿತ್ತು. ನಂತರ ಈ ನಗರದಲ್ಲಿ ಕೊರೋನಾ ವೈರಸ್​ ಪೀಡಿತರ ಸಂಖ್ಯೆ ಹೆಚ್ಚಿತು. ಇಂದು ಇಟಲಿಯಲ್ಲಿ 47021 ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 4032 ಮಂದಿ ಸಾವನ್ನಪ್ಪಿದ್ದಾರೆ. 5129 ಮಂದಿ ಗುಣಮುಖರಾಗುತ್ತಿದ್ದಾರೆ. 2655 ಮಂದಿ ತುರ್ತುನಿಗಾದಲ್ಲಿದ್ದಾರೆ. ಮಾ.16 ರ ನಂತರ ಸಾವಿನ ಸಂಖ್ಯೆ ಹೆಚ್ಚುತ್ತಿದೆ.  ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ.

ಆರಂಭದಲ್ಲಿ  ಬಂದ್ ಗೆ ಕರೆ ನೀಡಿದ್ದರೂ  ಜನರು  ಸುತ್ತಾಡಿಕೊಂಡಿದ್ದಾರೆ. ಹೀಗಾಗಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

( Source :ಸುದ್ದಿ ಸಂಸ್ಥೆಗಳು )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

3 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

5 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

5 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

19 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago